Kadri: ಲೈಂಗಿಕ ಕಿರುಕುಳ ಆರೋಪ, ಪೋಕ್ಸೋ ಪ್ರಕರಣ ದಾಖಲು – ಕದ್ರಿ ದೇವಳ ಅರ್ಚಕ ಅಮಾನತು

Kadri: ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಗಣಪತಿ ಗುಡಿಯ ಅರ್ಚಕ ಶಂಕರ ಅಲೆವೂರಾಯ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಗೊಳಿಸಲಾಗಿದೆ.

ಹೌದು, ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಗಣಪತಿ ಗುಡಿಯ ಅರ್ಚಕ ಶಂಕರ ಅಲೆವೂರಾಯ 2021ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಇತ್ತೀಚೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿಅಮಾನತು ಮಾಡಲಾಗಿದೆ ಎಂದು ದೇವಳದ ಕಾರ್ಯ ನಿರ್ವಹಣಾಧಿಕಾರಿಯವರು ತಿಳಿಸಿದ್ದಾರೆ.