Mangaluru: ಮಂಗಳೂರು : ಕದ್ರಿ ಪಾರ್ಕ್‌ನಲ್ಲಿ ಡಿ. 7 ಮತ್ತು 8 ರಂದು ಬೃಹತ್ ‘ವೈನ್’ ಮೇಳ!!

Mangaluru: ಆರೋಗ್ಯಕ್ಕೆ ಹಿತಕರವಾಗಿರುವ ‘ವೈನ್’ ಮೇಳವನ್ನು (Wine Festival )ಮಂಗಳೂರು (Mangaluru) ನಗರದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ರತ್ನಾ’ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದೆ.

ಹೌದು, ಡಿ.7 ಹಾಗೂ 8ರಂದು ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಮಂಗಳೂರು ಕದ್ರಿಪಾರ್ಕ್ ನಲ್ಲಿ ದ್ರಾಕ್ಷಾ ರಸ ಪ್ರದರ್ಶನ, ಮಾರಾಟ ಹಾಗೂ ಬೃಹತ್ ವೈನ್ ಮೇಳ ಆಯೋಜಿಸಲಾಗಿದೆ. ಮುಖ್ಯವಾಗಿ ‘ಪ್ರದರ್ಶನ-ಸವಿಯುವಿಕೆ-ಮಾರಾಟ’ ಎಂಬ ಘೋಷವಾಕ್ಯದೊಂದಿಗೆ ವೈನ್ ಮೇಳ ಆಚರಿಸಲ್ಪಡುತ್ತಿದ್ದು ದ್ರಾಕ್ಷಾ ರಸ ಉತ್ಪಾದಕ ಸಂಸ್ಥೆಗಳ ಮೂಲಕ ಅತ್ಯಾಕರ್ಷಕ ದರ ಹಾಗೂ ಅತ್ಯುತ್ತಮ ಕೊಡುಗೆಗಳೊಂದಿಗೆ ಮಾರಾಟವನ್ನು ಏರ್ಪಡಿಸಲಾಗಿದೆ.

DAILY PRIZE DRAW
23:59:59
Daily Prize
Enter Now and Earn $50
View this ad to enter today's drawing
1,453 entries today

ವೈನ್ ಸೇವನೆಯಿಂದ ಹತ್ತು ಹಲವು ಆರೋಗ್ಯಕರ ಲಾಭಗಳಿರುವ ಬಗ್ಗೆ ಜರ್ನಲ್ ನೇಚರ್ ಎಂಬ ವರದಿಯಲ್ಲಿ ಪ್ರಕಟಗೊಂಡ ಅಧ್ಯಯನದಲ್ಲಿ ಈ ಬಗ್ಗೆ ಸಾಬೀತು ಮಾಡಲಾಗಿದೆ. ಅದರಲ್ಲೂ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಹಿತದೃಷ್ಟಿಯಿಂದ ಬೆಳೆಗೆ ಉತ್ತಮ ಬೇಡಿಕೆ ಹಾಗೂ ಬೆಲೆ ಸಿಗುವ ಉದ್ದೇಶಕ್ಕಾಗಿ ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ, ಕರ್ನಾಟಕ ದ್ರಾಕ್ಷಾ ರಸ ಮಂಡಳಿ ಹಾಗೂ ಕರ್ನಾಟಕದ ವೈನರಿಗಳ ಸಹಕಾರದೊಂದಿಗೆ ಈ ಮೇಳ ಕೈಗೊಳ್ಳಲಾಗಿದೆ.

ಇನ್ನು ಸಾಂಪ್ರದಾಯಿಕವಾಗಿ ತಯಾರಾದ ರೆಡ್‌ವೈನ್‌ನಲ್ಲಿ ರೆಸ್ವೆರಾಟ್ರೋಲ್ ಮತ್ತು ಫ್ಲೇವನಾಯ್ಡ ಗಳ ಅಂಶ ಹೆಚ್ಚಿರುತ್ತದೆ. ಇವುಗಳು ಹೃದಯದ ಆರೋಗ್ಯವನ್ನು ಚೆನ್ನಾಗಿ ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ವೈನ್‌ನ ನಿಯಮಿತ ಸೇವನೆಯಿಂದ ನೋಡುವವರ ಕಣ್ಣಿಗೆ ಸದಾ ಯೌವನಭರಿತರಾಗಿ ಕಾಣಿಸುವುದರ ಜೊತೆಗೆ ಆಯಸ್ಸು ಕೂಡ ಹೆಚ್ಚಾಗುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸಿ ರಕ್ತದ ಚಲನೆಯ ಸಮತೋಲನವನ್ನು ಕಾಪಾಡುತ್ತದೆ. ಜೀರ್ಣಕ್ರಿಯೆಗೂ ಸಹಕಾರಿಯಾಗಿದೆ.
2 ದಿನಗಳ ವರೆಗೆ ನಡೆಯುವ ಈ ದ್ರಾಕ್ಷಾ ರಸ ಪ್ರದರ್ಶನ, ಮಾರಾಟ ಹಾಗೂ ಬೃಹತ್ ವೈನ್ ಮೇಳದಲ್ಲಿ ದೇಶಿಯ, ವಿದೇಶಿಯ ವೈನ್ ಬ್ರಾಂಡಿನ ಪರಿಚಯ, ವೈನ್‌ನ ಆರೋಗ್ಯಕರ ಉಪಯೋಗ, ವೈನ್‌ನ ಉತ್ಪಾದನಾ ವಿಧಾನ ಹಾಗೂ ಬಳಕೆ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.