Aravind Kejriwal: ದೆಹಲಿ ಚುನಾವಣಾ ಫಲಿತಾಂಶದ ಬಗ್ಗೆ ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

Aravind Kejriwal; ದೆಹಲಿ ಚುನಾವಣಾ ಫಲಿತಾಂಶದ ನಂತರ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿ ಚುನಾವಣೆಯಲ್ಲಿ ಆಪ್ ಸೋಲು ಒಪ್ಪಿಕೊಂಡ ಕೇಜ್ರಿವಾಲ್ ಅವರು, “ದೆಹಲಿ ಮಹಾಜನತೆಯ ತೀರ್ಪನ್ನು ಹೃದಯಪೂರ್ವಕವಾಗಿ ಸ್ವೀಕರಿಸುವೆ. ದೆಹಲಿ ವಿಧಾನಸಭೆಯಲ್ಲಿ ಪ್ರಬಲ ವಿಪಕ್ಷವಾಗಿ ಹೋರಾಟ ಮಾಡ್ತೇವೆ. ಕಳೆದ 10 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಕಾರ್ಯ ಮಾಡಿದ್ದೇವೆ. ಮುಂದಿನ ದಿನಗಳಲ್ಲೂ ಜನಪರ ಹೋರಾಟ ಮುಂದುವರಿಸುತ್ತೇವೆ. ದೆಹಲಿ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿಗೆ ಅಭಿನಂದನೆ ಸಲ್ಲಿಸುವೆ” ಎಂದು ಹೇಳಿದರು.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಸಾರ್ವಜನಿಕರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ನಾವು ಸ್ವೀಕರಿಸುತ್ತೇವೆ. ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಸಾರ್ವಜನಿಕರು ಅವರಿಗೆ ಬಹುಮತ ನೀಡಿದ ಭರವಸೆಯೆಂದರೆ ಅವರು ತಮ್ಮ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುತ್ತಾರೆ ಎಂದು ಹೇಳಿದರು.
Comments are closed.