Actress Ranya Rao: ಅಕ್ರಮ ಚಿನ್ನ ಸಾಗಾಣೆ ಪ್ರಕರಣ; ರನ್ಯಾ ರಾವ್‌ ಕೇಸ್‌ನಲ್ಲಿ ಸಿಐಡಿ ತನಿಖೆ ಹಿಂಪಡೆತ ಕುರಿತು ಪರಮೇಶ್ವರ್‌ ಸ್ಪಷ್ಟನೆ!

Actress Ranya Rao: ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ರನ್ಯಾ ಅವರ ಪ್ರಕರಣದಲ್ಲಿ ಪೊಲೀಸ್‌ ಪ್ರೊಟೋಕಾಲ್‌ ಉಲ್ಲಂಘನೆ ಆಗಿರುವ ಕುರಿತು ರಾಜ್ಯ ಸರಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಇದನ್ನು 24 ಗಂಟೆಯಲ್ಲಿ ಹಿಂಪಡೆಯಲಾಗಿದೆ. ಈ ಕುರಿತು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಹೇಳಿದ್ದು, ಈ ಮೂಲಕ ಕೆಲವೊಂದು ವದಂತಿಗಳಿಗೆ ಉತ್ತರ ನೀಡಿದ್ದಾರೆ.

” ಪೊಲೀಸ್ ಪ್ರೊಟೋಕಾಲ್‌ ಉಲ್ಲಂಘನೆ ಬಗ್ಗೆ ತಿಳಿದುಕೊಳ್ಳಲು ನಾನು ಸಿಐಡಿ ತನಿಖೆಗೆ ಆದೇಶ ಮಾಡಿದೆ. ಆದರೆ ಅಷ್ಟರಲ್ಲಿ ಸಿಎಂ ಕಚೇರಿಯಿಂದ ಮೇಲ್ಮಟ್ಟದ ತನಿಖೆಗೆ ಆದೇಶ ನೀಡಲಾಗಿತ್ತು. ಒಂದೇ ವಿಚಾರಕ್ಕೆ ಎರಡು ಕಡೆ ತನಿಖೆ ಆದೇಶ ನೀಡಲಾಗಿತ್ತು. ಒಂದೇ ವಿಚಾರಕ್ಕೆ ಎರಡು ಕಡೆ ತನಿಖೆ ಬೇಡ ಎನ್ನುವ ಕಾರಣಕ್ಕೆ ಸಿಐಡಿ ತನಿಖೆಯನ್ನು ಹಿಂಪಡೆಯಲಾಗಿದೆ” ಎಂದು ಹೇಳಿದ್ದಾರೆ.

ತನಿಖೆಗೆ ಯಾರೂ ಒತ್ತಡ ಹೇರಿರಲಿಲ್ಲ. ಹಿಂದಕ್ಕೆ ಪಡೆಯಲೂ ಯಾರೂ ಒತ್ತಡ ಹೇರಿಲ್ಲ. ಎರಡು ತನಿಖೆ ಬೇಡ ಎಂಬ ಕಾರಣಕ್ಕೆ ನಾವು ಹಿಂಪಡೆದಿದ್ದೇವೆ ಅಷ್ಟೇ. ಇಲ್ಲಿ ಯಾವುದೇ ಗೊಂದಲ ಬೇಡʼ ಎಂದು ಪರಮೇಶ್ವರ್‌ ಹೇಳಿದ್ದಾರೆ.

Comments are closed.