Accident: ಗಂಗೊಳ್ಳಿ : ಕಂಪೌಂಡ್ ಗೆ ಬೈಕ್ ಡಿಕ್ಕಿ: ಸವಾರ ಸ್ಪಾಟ್ ಡೆತ್!

Accident: ಕುಂದಾಪುರ ಸಮೀಪದ ಗಂಗೊಳ್ಳಿ ಪೊಲೇಸ್ ಠಾಣಾ ವ್ಯಾಪ್ತಿಯ ಮೊವಾಡಿ ಬಳಿಯಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಕಂಪೌಂಡ್ ಗೆ ಡಿಕ್ಕಿ (accident ) ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ಮೊವಾಡಿ ನಿವಾಸಿ ಕೃಷ್ಣ ಮೊಗವೀರ ಇವರ ಪುತ್ರನಾದ ನಿತಿನ್ ಮೊಗವೀರ (26 ವರ್ಷ) ಎಂದು ಗುರುತಿಸಲಾಗಿದೆ. ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.