KUNAL KAMRA: ಏಕನಾಥ್‌ ಶಿಂಧೆಗೆ ಅಪಹಾಸ್ಯ; ಕಾರ್ಯಕ್ರಮ ಸ್ಥಳ ಧ್ವಂಸ, ವಿಡಿಯೋ ವೈರಲ್!

Mumbai: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಸ್ಟ್ಯಾಂಡ್‌-ಅಪ್‌ ಕಾಮಿಡಿಯನ್‌ ಕುನಾಲ್‌ ಕಮ್ರಾ ಅವರ ಕಾರ್ಯಕ್ರಮದ ಸ್ಥಳವನ್ನೇ ಶಿವಸೇನಾ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ನಡೆದಿದೆ.

ಕುನಾಲ್‌ ಕಮ್ರಾ ಅವರ ಕಾರ್ಯಕ್ರಮದಲ್ಲಿ ಉಪಮುಖ್ಯಂತ್ರಿಯನ್ನು ಅಪಹಾಸ್ಯ ಮಾಡಲಾಗಿದ್ದು, ದೇಶದ್ರೋಹಿ ಎಂದು ಉಲ್ಲೇಖಿಸಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ. ಈ ಹೇಳಿಕೆಗೆ ಶಿವಸೇನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ʼದಿ ಯುನಿಕಾಂಟಿನೆಂಟಲ್‌ ಮುಂಬೈʼ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಹಾಗೂ ಬಂಧನಕ್ಕೆ ಒತ್ತಾಯ ಮಾಡಿದ್ದಾರೆ.

Comments are closed.