V Somanna: ಬೆಂಗಳೂರು – ಕುಕ್ಕೆ ಸುಬ್ರಮಣ್ಯಕ್ಕೆ ಹೊಸ ರೈಲು, ಸಚಿವ ಸೋಮಣ್ಣ ಘೋಷಣೆ

V Somanna: ಬೆಂಗಳೂರು ಮತ್ತು ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ ಮತ್ತೊಂದು ಹೊಸ ರೈಲನ್ನು ಓಡಿಸುವುದಾಗಿ ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ ಅವರು ಘೋಷಣೆ ಮಾಡಿದ್ದಾರೆ.
ತುಮಕೂರು ರೈಲ್ವೆ ನಿಲ್ದಾಣದ ಮೇಲ್ಸೇತುವೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣ, ಕುಕ್ಕೆ ಸುಬ್ರಮಣ್ಯ ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದ್ದಾರೆ. ಇದೇ 12ರಿಂದ ಬೆಂಗಳೂರು ಹಾಗೂ ಕುಕ್ಕೆ ಸುಬ್ರಮಣ್ಯ ನಡುವೆ ಹೊಸ ರೈಲನ್ನು ಓಡಿಸಲಿದ್ದೇವೆ. ಈ ರೈಲು ನಾಲ್ಕು ಬಾರಿ ಸಂಚರಿಸಲಿದೆ ಎಂದು ಸೋಮಣ್ಣ ತಿಳಿಸಿದ್ದಾರೆ.
Comments are closed.