Mangalore: ವಕ್ಫ್ ತಿದ್ದುಪಡಿ ವಿರುದ್ಧ ಪ್ರತಿಭಟನೆ: ಎ.18 ಮಂಗಳೂರಿನಲ್ಲಿ ವಾಹನ ಸಂಚಾರ ಬದಲಾವಣೆ

Mangalore: ಎ.18ರಂದು ಪಡೀಲ್ ಬಿ.ಸಿ.ರೋಡ್ ರಸ್ತೆಯಲ್ಲಿರುವ ಕಣ್ಣೂರು ಅಡ್ಯಾರ್ನ ಷಾ ಗಾರ್ಡನ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಕ್ಸ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆಯನ್ನು ಸಹ ಮಾಡಲಾಗಿದೆ.
ಏ.18ರಂದು ಮಧ್ಯಾಹ್ನ 12-00 ಗಂಟೆಯಿಂದ ರಾತ್ರಿ 21-00 ಗಂಟೆಯವರೆಗೆ ಪಡೀಲ್ನಿಂದ ಬಿ.ಸಿ.ರೋಡ್ ಕಡೆಗೆ ಹಾಗೂ ಬಿ.ಸಿ.ರೋಡ್ ಕಡೆಯಿಂದ ಪಡೀಲ್ ಕಡೆಗೆ ಬಾರದಂತೆ ನಿರ್ಭಂದಿಸಿದ್ದು. ಇಲಾಖೆಯ ಅಧೀನದಲ್ಲಿ ಬರುವ ನಗರದ ಎಲ್ಲಾ ಕೈಗಾರಿಕಾ ಸಂಸ್ಥೆಗಳಿಗೆ ಬರುವ ಹಾಗೂ ಹೊರಡುವ ಟ್ಯಾಂಕರ್ ಮತ್ತು ಇತರ ಘನ ಸರಕು ವಾಹನಗಳನ್ನು ಈ ಕೆಳಕಂಡ ಮಾರ್ಗದಲ್ಲಿ ಸಂಚರಿಸಲು ಸೂಕ್ತ ನಿರ್ದೇಶನಗಳನ್ನು ನೀಡುವಂತೆ ವಿನಂತಿಯನ್ನು ಮಾಡಲಾಗಿದೆ.
ಮೆಲ್ಕಾರು ಜಂಕ್ಷನ್ ಪುತ್ತೂರು ಬಂಟ್ವಾಳ ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ ಬೊಳಿಯಾರ್ ಮುಡಿಪು ದೇರಳಕಟ್ಟೆ – ತೊಕ್ಕೊಟ್ಟು ಮೂಲಕ ಸಂಚರಿಸುವುದು.
*ಬಿ.ಸಿ. ರೋಡ್ ಪೊಳಲಿ ದ್ವಾರ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮುಖಾಂತರ ಕಲ್ಪನೆ ಜಂಕ್ಷನ್ ನೀರುಮಾರ್ಗ ಬೈತುರ್ಲಿ ಕುಲಶೇಖರ ನಂತೂರು ಮೂಲಕ ಸಂಚರಿಸುವುದು.
*ಪಂಪ್ವೆಲ್ ಜಂಕ್ಷನ್ ಮಂಗಳೂರು ನಗರ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು – ದೇರಳಕಟ್ಟೆ -ಮುಡಿಪು ಬೊಳಿಯಾರ್ ಮೆಲ್ಕಾರ್ ಮೂಲಕ ಸಂಚರಿಸುವುದು.
*ನಂತೂರು ವೃತ್ತ ಬಿಕರ್ನಕಟ್ಟೆ ಬೈತುರ್ಲಿ ಜಂಕ್ಷನ್ ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕುಲಶೇಖರ ಬೈತುರ್ಲಿ ನೀರುಮಾರ್ಗ ಕಲ್ಪನೆ ಜಂಕ್ಷನ್ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
ಕೆ.ಪಿ.ಟಿ. ವೃತ್ತ ಮಂಗಳೂರು ನಗರ /ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ ಪಚ್ಚನಾಡಿ ಬೈತುರ್ಲಿ ಮೂಲಕ ಅಥವಾ ಬೋಂದೆಲ್ ಮೂಡಬಿದ್ರೆ ಮೂಲಕ ಸಂಚರಿಸುವುದು. ಕಾವೂರು – ಬಜಪೆ – ಕೈಕಂಬ-ಮೂಡಬಿದ್ರೆ ಮೂಲಕ ಸಂಚರಿಸುವುದು.
*ಮುಲ್ಕಿ ವಿಜಯಸನ್ನಿದಿ: ಉಡುಪಿ ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೊಳಿ ಮೂಡಬಿದ್ರೆ ಸಿದ್ಧಕಟ್ಟೆ – ಬಂಟ್ವಾಳ ಮೂಲಕ ಸಂಚರಿಸುವುದು.
*ಪಡುಬಿದ್ರೆ: ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ ಮೂಡಬಿದ್ರೆ ಸಿದ್ಧಕಟ್ಟೆ – ಬಂಟ್ವಾಳ ಮೂಲಕ ಸಂಚರಿಸುವುದು.
Comments are closed.