Puttur: ವೈದ್ಯಾಧಿಕಾರಿ ಹಲ್ಲೆಗೆ ಯತ್ನ-ಆರೋಪಿಯನ್ನು ಬಂಧಿಸದಿದ್ದರೆ ಪುತ್ತೂರು ಬಂದ್ : ಅರುಣ್ ಪುತ್ತಿಲ

Puttur: ಪುತ್ತೂರು (Puttur) ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಪುತ್ತೂರಿನ ಕೆಲವು ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಶಾಖೆ ಪದಾಧಿಕಾರಿಗಳು ಹಾಗೂ ಅರುಣ್ ಕುಮಾರ್ ಪುತ್ತಿಲ ಸಹಿತ ನೂರಾರು ಮಂದಿ ಪೊಲೀಸರ ನಡೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.
ಒಂದು ವೇಳೆ ಆರೋಪಿಯನ್ನು ಬಂಧಿಸದಿದ್ದರೆ ಪುತ್ತೂರಿನಲ್ಲಿ ಎಲ್ಲಾ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಪುತ್ತೂರು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಅರುಣ್ ಕುಮಾರ್ ಪುತ್ತಿಲ ಮಾಧ್ಯಮ ಮೂಲಕ ತಿಳಿಸಿದ್ದಾರೆ.
Comments are closed.