ಪಾಕ್ ವಾಯುಮಾರ್ಗ ಬಂದ್: ಏರ್ಲೈನ್ಗಳಿಗೆ ಮಾರ್ಗಸೂಚಿ ಬಿಡುಗಡೆ

New delhi: ಪಾಕ್ ವಾಯುಮಾರ್ಗ ಬಂದ್ ಆದ ಹಿನ್ನೆಲೆಯಲ್ಲಿ ವಿಮಾನಯಾನ ಸಚಿವಾಲಯವು ವಿಮಾನ ಕಂಪನಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಯಾಣಿಕರಿಗೆ ಮಾರ್ಗ ಬದಲಾವಣೆಗಳ ಬಗ್ಗೆ ಸರಿಯಾಗಿ ತಿಳಿಸಬೇಕು ಎಂಬುದು ಇಲ್ಲಿನ ಪ್ರಮುಖ ನಿರ್ದೇಶನ. ಆದರೆ ಈ ನಿಟ್ಟಿನಲ್ಲಿ ಆಗಬಹುದಾದ ಹೆಚ್ಚುವರಿ ಟಿಕೆಟ್ ದರ ಏರಿಕೆಯ ಬಗ್ಗೆ ಸರ್ಕಾರದ ನಡೆ ಇನ್ನೂ ಸ್ಪಷ್ಟವಾಗಿಲ್ಲ.
ಅಲ್ಲದೆ, ಮಾರ್ಗ ಬದಲಾವಣೆಯಿಂದಾಗಿ ವಿಮಾನ ಎಲ್ಲಿ ಲ್ಯಾಂಡ್ ಆಗುತ್ತದೆ ಎಂಬ ಬಗ್ಗೆಯೂ ಮುಂಚಿತವಾಗಿ ಮಾಹಿತಿ ನೀಡಬೇಕು. ಪ್ರಯಾಣಿಕರಿಗೆ ವೈದ್ಯಕೀಯ ನೆರವು, ಸಾಕಷ್ಟು ಆಹಾರ ಮತ್ತು ನೀರು ಒದಗಿಸಬೇಕು ಎಂದು ಸಚಿವಾಲಯ ಸೂಚಿಸಿದೆ. ಆದರೆ ಈ ಕಾರಣದಿಂದ ವಿಮಾನ ಟಿಕೆಟ್ ದರ ಏರಿಕೆಯಾದರೆ ಕೇಂದ್ರ ಮಧ್ಯಪ್ರವೇಶಿಸುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ.
ವಾಯುಮಾರ್ಗ ಬಂದ್ ಹಿನ್ನೆಲೆಯಲ್ಲಿ ಮಾರ್ಗ ಬದಲಾವಣೆಯ ಕಾರಣ ಹೆಚ್ಚುವರಿ ಇಂಧನ ವೆಚ್ಚದ ಹೆಸರಿನಲ್ಲಿ ಅಂತರರಾಷ್ಟ್ರೀಯ ಪ್ರಯಾಣದ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆಯಿದೆ. ಶನಿವಾರ ಬೆಳಿಗ್ಗೆ ಕೇಂದ್ರ ವಿಮಾನಯಾನ ಸಚಿವಾಲಯವು ವಿವರವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಮಾರ್ಗ ಬದಲಾವಣೆ ಕಾರಣ ಪ್ರಯಾಣದ ಅವಧಿ ಹೆಚ್ಚಾಗುವುದು ಸೇರಿದಂತೆ ತಾಂತ್ರಿಕ ಕಾರಣಗಳಿಗಾಗಿ ಯಾವ ವಿಮಾನ ನಿಲ್ದಾಣಗಳಲ್ಲಿ ವಿಮಾನವನ್ನು ಇಳಿಸಬೇಕಾಗುತ್ತದೆ ಎಂಬುದನ್ನು ಮುಂಚಿತವಾಗಿ ಪ್ರಯಾಣಿಕರಿಗೆ ತಿಳಿಸಬೇಕು ಎಂಬುದು ನಿರ್ದೇಶನ ಕೊಡಲಾಗಿದೆ. ಹೊಸ ಮಾರ್ಗದಲ್ಲಿ ಎಷ್ಟು ಸಮಯದಲ್ಲಿ ತಲುಪುತ್ತದೆ ಎಂಬುದನ್ನೂ ಪ್ರಯಾಣಿಕರಿಗೆ ತಿಳಿಸಬೇಕು. ವೈದ್ಯಕೀಯ ಕಿಟ್ಗಳನ್ನು ಸೇರಿದಂತೆ ಅಗತ್ಯ ವಸ್ತುಗಳನ್ನು ಸಂಗ್ರಹಿಸಬೇಕು. ತುರ್ತು ಸಂದರ್ಭ ಲ್ಯಾಂಡ್ ಆಗುವ ವಿಮಾನ ನಿಲ್ದಾಣಗಳಲ್ಲಿ ಈ ಬಗ್ಗೆ ಅಗತ್ಯ ಮಾಹಿತಿ ನೀಡಬೇಕು ಎಂಬ ನಿರ್ದೇಶನವೂ ಇದೆ.
ಭಯೋತ್ಪಾದಕ ದಾಳಿಯ ಹಿನ್ನೆಲೆ ತೆಗೆದುಕೊಂಡ ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಕ್ರಮಗಳಲ್ಲಿ ಪಾಕ್ ವಾಯುಮಾರ್ಗದಲ್ಲಿ ಭಾರತದಿಂದ ಮತ್ತು ಭಾರತಕ್ಕೆ ವಿಮಾನಗಳಿಗೆ ನಿಷೇಧ ಹೇರಿದ್ದು ಕೂಡಾ ಒಂದು. ಇದರಿಂದಾಗಿ ಅಂತರರಾಷ್ಟ್ರೀಯ ವಿಮಾನ ಸೇವೆಗಳು ಸೇರಿದಂತೆ ಬೇರೆ ವಿಮಾನಗಳು ಮಾರ್ಗ ಬದಲಾಯಿಸಿ ಬಳಸಿಕೊಂಡು ಸಾಗಬೇಕಾಗುತ್ತದೆ.
Comments are closed.