Mangaluru: ರೈಲ್ವೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಜನಿವಾರ, ಮಂಗಳಸೂತ್ರ ನಿಷಿದ್ಧ!

Mangaluru: ರೈಲ್ವೇ ನೇಮಕಾತಿ ಮಂಡಳಿ ಪರೀಕ್ಷೆ 29 ರಂದು ನಡೆಯಲಿದೆ. ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಅಭ್ಯರ್ಥಿಗಳಿಗೆ ಹಾಲ್ಟಿಕೆಟ್ ನೀಡಲಾಗಿದೆ. ಇದರಲ್ಲಿ ಮಂಗಳಸೂತ್ರ ಮತ್ತು ಧಾರ್ಮಿಕ ಸಂಕೇತಗಳನ್ನೆಲ್ಲ ತೆಗೆದಿರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.
ರೈಲ್ವೆ ನೇಮಕಾತಿ ಮಂಡಳಿಯ ಈ ಕ್ರಮಕ್ಕೆ ಜಿಲ್ಲೆಯ ಹಿಂದೂ ಪರ ಸಂಘಟನೆಗಳ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಮಣೇಲ್ ಬೆಸೆಂಟ್ ವಿದ್ಯಾ ಕೇಂದ್ರದಲ್ಲಿ ಈ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ನೀಡಲಾದ ಹಾಲ್ಟಿಕೆಟ್ನಲ್ಲಿ ಮಂಗಳಸೂತ್ರ ತೆಗೆದಿರಿಸುಂತೆ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.
ಜನಿವಾರ ಮತ್ತು ಮಂಗಳಸೂತ್ರ ಹಿಂದೂಗಳ ಧಾರ್ಮಿಕ ಸಂಪ್ರದಾಯ. ಇದನ್ನು ತೆಗೆದು ಪರೀಕ್ಷೆ ಬರೆಯುವಂತೆ ಉಲ್ಲೇಖ ಮಾಡಿರುವುದನ್ನು ಪ್ರವೇಶ ಪತ್ರದಲ್ಲಿ ತಿಳಿಸಲಾಗಿದೆ.
Comments are closed.