ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು: ಎಚ್. ವಿಶ್ವನಾಥ್

Mysore: ದೇಶದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಒತ್ತಾಯಿಸಿದ್ದಾರೆ. ಅವರು ಗುರುವಾರ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್’ರವರು, ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ ಎಂದರು.
‘ಈಗ ಯುದ್ಧದ ವಾತಾವರಣ ಸೃಷ್ಟಿಯಾಗಿದ್ದು, ಇಡೀ ದೇಶ ಪ್ರಧಾನಿ ನರೇಂದ್ರ ಮೋದಿ ಅವರ ಪರ ನಿಲ್ಲಬೇಕಾಗಿದೆ’ ಎಂದು ಅವರು ಹೇಳಿದರು. ಜನಗಣತಿ ಜೊತೆ ಜಾತಿ ಗಣತಿಯನ್ನೂ ನಡೆಸಲು ಕೇಂದ್ರ ನಿರ್ಣಯ ಕೈಗೊಂಡಿರುವುದು ಸ್ವಾಗತಾರ್ಹ. ಎಲ್ಲಾ ಜಾತಿಯ ಮುಖಂಡರೂ ಇದನ್ನು ಸ್ವಾಗತಿಸಿದ್ದಾರೆ. ಈಗ, ರಾಜ್ಯದಲ್ಲಿ ನಡೆಸಲಾದ ಸಮೀಕ್ಷಾ ವರದಿಯನ್ನು ಸರ್ಕಾರ ಅಧಿಕೃತವಾಗಿ ಬಹಿರಂಗಪಡಿಸಲಿ’ ಎಂದು ಅವರು ಆಗ್ರಹಿಸಿದರು.
‘ಕೇಂದ್ರ ಸರ್ಕಾರ ನಡೆಸುವ ಜಾತಿ ಗಣತಿಗೆ ವಿಶ್ವಾಸಾರ್ಹತೆ ಹೆಚ್ಚು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಬೇಕಾದವರನ್ನು ಕೂರಿಸಿಕೊಂಡು ಗಣತಿ ಮಾಡಿಸಿದ್ದರಿಂದ ಎಡವಟ್ಟುಗಳಾದವು. ಕಾಂತರಾಜ್ ಆಯೋಗದ ವರದಿಯ ಮೂಲ ಪ್ರತಿಯೇ ಇಲ್ಲದೆ ಹೇಗೆ ಸಮೀಕ್ಷೆ ನಡೆಸಿದ್ದಾರೆ?’ ಎಂದು ಕೇಳಿದರು.
ಕರ್ನಾಟಕದ ಜಾತಿ ಗಣತಿ ರಾಜಕೀಕರಣಗೊಂಡಿದೆ. ಗಣತಿ ಮಾಡಿದ ತಂಡವು ಒಂದು ರೀತಿ ಗಂಜಿ ಕೇಂದ್ರದ ತಂಡದಂತೆ ಆಗಿಹೋಗಿದೆ. ತಜ್ಞರಲ್ಲದೆ ಇರುವವರನ್ನು ಸೇರಿಸಿಕೊಂಡಿದ್ದರಿಂದ ಎಡವಟ್ಟಾದವು ಎಂದು ಅವರು ಎಚ್. ವಿಶ್ವನಾಥ್ ದೂರಿದರು.
Comments are closed.