Pune: ದೇವಿ ವಿಗ್ರಹದ ಮೇಲೆ ಮೂತ್ರ ವಿಸರ್ಜನೆ ಮಾಡಿದ ಕಿಡಿಗೇಡಿ- ವೀಡಿಯೋ ವೈರಲ್‌

Share the Article

Pune: ದೇವಸ್ಥಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಸುತ್ತಮುತ್ತ ಯಾರೂ ಇಲ್ಲದಿರುವುದನ್ನು ಗಮನಿಸಿ, ದೇವರ ವಿಗ್ರಹದ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

19 ವರ್ಷದ ಚಾಂದ್‌ ನೌಶಾದ್‌ ಶೇಖ್‌ ಎಂಬ ಹದಿಹರೆಯದ ವ್ಯಕ್ತಿ ಪುಣೆಯ ಪೌಡ್‌ ಗ್ರಾಮದಲ್ಲಿ ನಾಗೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ದೇವರ ವಿಗ್ರಹವನ್ನು ಎಸೆದು ಅದರ ಮೇಲೆ ಮೂತ್ರ ವಿಸರ್ಜಿಸಿ ದೇವಾಲಯದ ಆವರಣದಲ್ಲಿ ದುಷ್ಕೃತ್ಯ ಮೆರೆದಿದ್ದಾನೆ.

ಈ ವಿಕೃತ ಕೃತ್ಯ ದೇವಸ್ಥಾನದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಕ್ತರು ರೊಚ್ಚಿಗೆದ್ದಿದ್ದು, ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ. ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.

Comments are closed.