Karnataka Congress: ಭಾರತ ಪ್ರತೀಕಾರ ತೀರಿಸಿಕೊಂಡ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್; ಕಚಡಾ ಮನಸ್ಥಿತಿ ಎಂದ ಸೂಲಿಬೆಲೆ!

Karnataka Congress: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತದ ಮೂರು ಸೇನೆಗಳು ಜಂಟಿಯಾಗಿ ಅಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ಪಾಕಿಸ್ತಾನದ 9 ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿದ್ದು, ಇದರಲ್ಲಿ 80ಕ್ಕೂ ಉಗ್ರರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ದೇಶದ ಮೂಲೆ ಮೂಲೆಯಲ್ಲಿ ಜನರು ಸಂಭ್ರಮಾಚರಣೆ ನಡೆಯುತ್ತಿದೆ. ಈ ನಡುವೆ ಕರ್ನಾಟಕ ಕಾಂಗ್ರೆಸ್ ಎಕ್ಸ್ ಖಾತೆಯಿಂದ ಮಾಡಲ್ಪಟ್ಟ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ ಕಾಂಗ್ರೆಸ್ ಖಾತೆಯಲ್ಲಿ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂದು ಮಹಾತ್ಮ ಗಾಂಧಿಯವರ ಹೇಳಿಕೆಯನ್ನು ಟ್ವೀಟ್ ಮಾಡಿದೆ.
ಕಾಂಗ್ರೆಸ್ ಟ್ವೀಟ್ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ಗೆ ಚಕ್ರವರ್ತಿ ಸೂಲಿಬೆಲೆ ಪ್ರತಿಕ್ರಿಯೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ತುಂಬಾ ಕೆಟ್ಟದಾಗಿದ್ದು, ಈ ಟ್ವೀಟ್ ಮೂಲಕ ಮುಸಲ್ಮಾನರನ್ನು ಖುಷಿಪಡಿಸಬಹುದು ಎಂದು ಅಂದುಕೊಂಡಿರಬಹುದು. ಹಿಂದೂಗಳ ಮುಂದೆ ಮುಸ್ಲಿಮರು ನಿಕೃಷ್ಟ ಎಂದು ತೋರಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇಂದು ಭಾರತದ ಯಾವ ಮುಸ್ಲಿಮರು ಪಾಕಿಸ್ತಾನದ ಮೇಲೆ ಯುದ್ಧ ಆಗಬಾರದು ಎಂದು ಬಯಸಲ್ಲ. ಯಾರಾದರೂ ಯುದ್ಧ ಬೇಡ ಅನ್ನೋ ಮುಸ್ಲಿಂ ವ್ಯಕ್ತಿಯನ್ನು ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಕೈಯಲ್ಲಿ ಒಂದು ಲಾಠಿಯನ್ನು ಹಿಡಿಯದ ಸಾಮಾನ್ಯ 26 ಜನರನ್ನು ಗುಂಡಿಕ್ಕಿ ಕೊಂದಿರೋದಕ್ಕೆ ಭಾರತದ ಮುಸ್ಲಿಮರಿಗೂ ಆಕ್ರೋಶವಿದೆ. ಭಾರತದ ಪ್ರತಿಯೊಬ್ಬರು ಪಹಲ್ಗಾಂ ದಾಳಿಗೆ ಪ್ರತೀಕಾರ ಆಗಬೇಕೆಂದು ಬಯಸುತ್ತಾರೆ. ಕಾಂಗ್ರೆಸ್ನವರ ಮನಸ್ಥಿತಿ ತುಂಬಾ ಕಚಡಾ ಆಗಿದೆ ಎಂದು ಕಿಡಿಕಾರುವ ಕುರಿತು ವರದಿಯಾಗಿದೆ.
ಉಗ್ರರ ವಿರುದ್ಧ ಅಪರೇಷನ್ ಸಿಂಧೂರ್ ಮೂಲಕ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದ್ದು, ಕಾಂಗ್ರೆಸ್ನ ಈ ಟ್ವೀಟ್ಗೆ ಜನರು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಜನರ ವ್ಯಾಪಕ ಆಕ್ರೋಶ ಬೆನ್ನಲ್ಲೇ ಕಾಂಗ್ರೆಸ್ ಆ ಟ್ವೀಟನ್ನು ಡಿಲೀಟ್ ಮಾಡಿದೆ. ನಂತರ ಭಾರತೀಯ ಸೇನೆಯನ್ನು ಹೊಗಳುವ ಮೂಲಕ ಮತ್ತೊಂದು ಹೊಸ ಟ್ವೀಟ್ ಮಾಡಿದೆ.
Comments are closed.