Harish Poonja: ಕೋಮು ದ್ವೇಷ ಪ್ರಕರಣ; FIR ರದ್ದುಗೊಳಿಸುವಂತೆ ಹರೀಶ್ ಪೂಂಜಾ ಮನವಿ!

Belthangady: ಕೋಮು ದ್ವೇಷ ಹರಡಿದ ಆರೋಪದಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಮೇ 3 ರಂದು ತೆಕ್ಕಾರುವಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದಲ್ಲಿ ಹರೀಶ್ ಪೂಂಜಾ ಅವರು ಭಾಷಣ ಮಾಡುತ್ತಾ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಕೋಮು ದ್ವೇಷವನ್ನು ಹರಡುವ ಹೇಳಿಕೆಗಳನ್ನು ನೀಡಿದ್ದರು. ಈ ಭಾಷಣದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಪ್ರಸಾರವಾಗಿದ್ದು, ತೆಕ್ಕಾರುವಿನ ಎಸ್ಬಿ ಇಬ್ರಾಹಿಂ, ಪೂಂಜಾ ಅವರು ಕೋಮು ಸಂಘರ್ಷವನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲು ಮಾಡಿದ್ದರು.
Comments are closed.