Pratap Simha: ಸಿಎಂ ಮೊಮ್ಮಗನಿಗಾಗಿ ಸಂಭ್ರಮಾಚರಣೆ ಮಾಡಿದ್ರಾ: ಪ್ರತಾಪ್‌ ಸಿಂಹ ಪ್ರಶ್ನೆ

Share the Article

Pratap Simha: ರಾಜ್ಯ ಸರಕಾರದ ಬೇಜವಾಬ್ದಾರಿತನದಿಂದ ಆರ್‌ಸಿಬಿ ಗೆಲುವಿನ ಸಂಭ್ರಮಾಚಾರಣೆ ಶೋಕಾಚರಣೆ ಆಗಿ ಮಾರ್ಪಾಟಾಗಿದೆ. ಈ ಘಟನೆಗೆ ನೇರ ಹೊಣೆ ಕಾಂಗ್ರೆಸ್‌ ಸರಕಾರ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಿಎಂ, ಡಿಸಿಎಂ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಸಿದ್ದರಾಮಯ್ಯ ಒರಟು ವ್ಯಕ್ತಿ ಎಂದುಕೊಂಡಿದ್ದೆ. ಆದರೆ ನೀವು ಸಂವೇದನೆ ಇಲ್ಲದ ನಿರ್ಭಾವುಕ ಮನುಷ್ಯ ಎಂಬುವುದು ಈ ಘಟನೆಯಿಂದ ಗೊತ್ತಾಗಿದೆ. ಜಮೀರ್‌ ಮಗ, ರಿಜ್ವಾನ್‌ ಮಗ, ಮುಖ್ಯ ಕಾರ್ಯದರ್ಶಿ ಮಗಳು, ಸಿಎಂ ಮೊಮ್ಮಗನಿಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಿದ್ರಾ? ಎಂದು ಟೀಕೆ ಮಾಡಿದರು.

Comments are closed.