Scheme: ಸರ್ಕಾರದಿಂದ ಉಚಿತ ಬೋರ್ ವೆಲ್: ಅರ್ಜಿ ಆಹ್ವಾನ

Share the Article

Scheme:ಕರ್ನಾಟಕ ಸರ್ಕಾರವು ಕೃಷಿ ಚಟುವಟಿಕೆಗಳಿಗಾಗಿ ನೇರ ನೀರಾವರಿ ಸೌಲಭ್ಯ ವಿತರಣೆಯ ಯೋಜನೆ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ದ.ಕ, ಉಡುಪಿ, ಶಿವಮೊಗ್ಗ, ಕೊಡಗು, ಉತ್ತರಕನ್ನಡ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ಒಂದು ಎಕರೆ ಜಮೀನು ಹೊಂದಿರಬೇಕು.

ಇನ್ನು ರಾಜ್ಯ ಸರ್ಕಾರವು ಉಪ್ಪಾರ ಸಮುದಾಯದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ನಾನಾ ಸಹಾಯಧನ ಮತ್ತು ನೇರಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ಈ ಹಿಂದೆ ನಿಗಮದ ಅಥವಾ ಸರ್ಕಾರದ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದುಕೊಂಡಿರಬಾರದು. ಅರ್ಜಿ ಸಲ್ಲಿಸಲು ಜುಲೈ ೩ ಕೊನೆಯ ದಿನ.

ಇದನ್ನೂ ಓದಿ:Flight Mileage: ವಿಮಾನ ಎಷ್ಟು ಮೈಲೇಜ್ ಕೊಡುತ್ತೆ ?

Comments are closed.