Belagavi: ಭಾರೀ ಮಳೆಗೆ ಕೊಚ್ಚಿಹೋದ ಸೇತುವೆ: ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್

Belagavi: ಭಾರೀ ಮಳೆಯ ಕಾರಣ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದು ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್ ಆಗಿದೆ. ಖಾನಾಪುರ ತಾಲೂಕಿನಲ್ಲಿ ವರುಣಾರ್ಭಟ ಹೆಚ್ಚಿದ್ದು, ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಸೇತುವೆ ಪಕ್ಕ ವಾಹನ ಓಡಾಟಕ್ಕೆಂದು ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿತ್ತು.

ಮಲಪ್ರಭಾ ನದಿಯ ಒಳ ಹರಿವು ಹೆಚ್ಚಿದ್ದು, ರಸ್ತೆ ಕೊಚ್ಚಿ ಹೋಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಗೋವಾಗೆ ಪ್ರಯಾಣಿಸಲು ಸೂಚನೆಯನ್ನು ನೀಡಲಾಗಿದೆ.
Comments are closed.