Shiradi Ghat: ಶಿರಾಡಿಘಾಟ್ನಲ್ಲಿ ರಸ್ತೆಗೆ ಬಿದ್ದಿದ್ದ ಮಣ್ಣಿನ ತೆರವು ಕಾರ್ಯ ಪೂರ್ಣ- ಏಕಮುಖ ಸಂಚಾರಕ್ಕೆ ಅವಕಾಶ

Shiradi Ghat: ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಜೂನ್ 25ರ ಮಧ್ಯರಾತ್ರಿ ಸಂಭವಿಸಿದ ಗುಡ್ಡಕುಸಿತದಲ್ಲಿ ಮಣ್ಣು ತೆರವು ಕಾರ್ಯ ಪೂರ್ಣಗೊಳಿಸಲಾಗಿದೆ. ಇದೀಗ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ವರದಿಯಾಗಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮಧ್ಯರಾತ್ರಿ 1 ಗಂಟೆಯಿಂದ ವಾಹನ ಸಂಚಾರ ಬಂದ್ ಆಗಿ ಸಾವಿರಾರು ಮಂದಿ ರಸ್ತೆಯಲ್ಲಿ ಸಿಲುಕಿಕೊಂಡಿದ್ದರು. ವಾಹನ ಸಂಚಾರ ಬಂದ್ ಆದ ಬಳಿಕ ಹಾಸನ ಜಿಲ್ಲಾಧಿಕಾರಿ ಲತಾ ಬದಲಿ ಮಾರ್ಗವನ್ನು ಸೂಚಿಸಿದ್ದರು.
ಇದನ್ನೂ ಓದಿ:Crime: ಮುರುಡೇಶ್ವರ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಪೊಲೀಸ್ ರೈಡ್ ಮೂವರು ಅರೆಸ್ಟ್!
Comments are closed.