Mangaluru: ಬ್ಯಾಂಕ್ ಮ್ಯಾನೇಜರ್ ನಿಂದಲೇ ಗ್ರಾಹಕರು ಒತ್ತೆ ಇಟ್ಟ 6.5 ಕೆಜಿ ಚಿನ್ನಾಭರಣ ಕಳವು: ತಡವಾಗಿ ಬೆಳಕಿಗೆ ಬಂದ ಪ್ರಕರಣ

Mangaluru: ಗ್ರಾಹಕರು ಒತ್ತೆ ಇಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಮಂಗಳೂರು ನಗರದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಪ್ರಬಂಧಕ ಕಳವು ಮಾಡಿರುವ ಘಟನೆ ನಡೆದಿದೆ.

ಕಳವು ಮಾಡಿದ ಚಿನ್ನಾಭರಣಗಳನ್ನು ಬೇರೆ ಸೊಸೈಟಿಯಲ್ಲಿ ಒತ್ತೆ ಇಟ್ಟು ಸಾಲ ಪಡೆದು ವಂಚನೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿರುವ ಕುರಿತು ವರದಿಯಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿರುವ ಸೊಸೈಟಿಯೊಂದರಲ್ಲಿ ಈ ಘಟನೆ ನಡೆದಿದೆ. ಸೊಸೈಟಿಯ ಮ್ಯಾನೇಜರ್ 6.5 ಕೆಜಿ ಚಿನ್ನಾಭರಣ ಕಳವು ಮಾಡಿ ಬೇರೆ ಶಕ್ತಿನಗರದ ಸೊಸೈಟಿಯಲ್ಲಿ ಒತ್ತೆ ಇಟ್ಟಿದ್ದ. ಪೊಲೀಸರು 2.2 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮ್ಯಾನೇಜರ್ ಪರವಾಗಿ ಚಿನ್ನ ಒತ್ತೆ ಇಟ್ಟು ಸಾಲ ಪಡೆದಿದ್ದ ಸರಿಪಲ್ಲ ನಿವಾಸಿ ಶೇಕ್ ಮಹಮ್ಮದ್ ಎಂಬುವವನ್ನು ಬಂಧನ ಮಾಡಲಾಗಿದೆ.
ವಂಚನೆ ಪ್ರಕರಣದಲ್ಲಿ ಹಲವು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜೂನ್ 17 ರಂದು ಎಫ್ಐಆರ್ ದಾಖಲಾಗಿದೆ. ವಿದೇಶಕ್ಕೆ ಪರಾರಿಯಾಗಿರುವ ಮ್ಯಾನೇಜರ್ ಕೋರ್ಟ್ಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.
ಇದನ್ನೂ ಓದಿ: Karnataka Rain:ಕರಾವಳಿ ಸೇರಿ 9 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
Comments are closed.