Chikkaballapura: ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ನಾಳೆ ಪ್ರವಾಸಿಗರ ಪ್ರವೇಶ ನಿರ್ಬಂಧ-ಜಿಲ್ಲಾಧಿಕಾರಿ ಆದೇಶ

Chikkaballapura: ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ನಾಳೆ ಬೆಳಗ್ಗೆ 6 ರವರೆಗೆ ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧನೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ.
ಜುಲೈ 3 ರ ಬೆಳಗ್ಗೆ 6 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಂದಿಬೆಟ್ಟದಲ್ಲಿ ಇಂದು (ಜು.2) ರಾಜ್ಯ ಸಚಿವ ಸಂಪುಟ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರವಾಸಿಗರಿಗೆ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇದನ್ನೂ ಓದಿ: Heart Attack: ಬಿಜೆಪಿ ಯುವ ಮೋರ್ಚಾ ಮುಖಂಡ ಹೃದಯಾಘಾತದಿಂದ ಸಾವು
Comments are closed.