Weather Report: ಕರ್ನಾಟಕದ ಹವಾಮಾನ ವರದಿ: ಇಂದು ಕೂಡ ಮುಂದುವರೆದ ಮುಂಗಾರು ಆರ್ಭಟ – ಕೊಡಗು, ಕೇರಳದಲ್ಲಿ ಭಾರಿ ಮಳೆಯ ಮುನ್ಸೂಚನೆ

Share the Article

Weather Report: ರಾಜ್ಯದಲ್ಲಿ ಇಂದು ಕೂಡ ಮುಂದುವರೆದ ಮುಂಗಾರು ಆರ್ಭಟ ಮುಂದುವರೆಯಲಿದ್ದು, ರಾಜ್ಯದ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಎರಡು ಜಿಲ್ಲೆಗಳಿಗೆ ಯೆಲ್ಲೋ‌ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ,ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾದರೆ ಉಳಿದ ಜಿಲ್ಲೆಗಳಿಗೆ ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮಳೆ ಜಾಸ್ತಿಯೇ ಇರಬಹುದು. ಈಗಿನಂತೆ ಜುಲೈ 21ರ ತನಕ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಂತರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಜುಲೈ ಕೊನೆಯ ತನಕವೂ ಅವಕಾಶ ಸಿಗುವುದು ಕಡಿಮೆ ಇರಬಹುದು.

ಮಲೆನಾಡು : ಕೊಡಗು(ಭಾರಿ ಮಳೆಯ ಮುನ್ಸೂಚೆನೆ ಇದೆ), ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಜುಲೈ 21ರ ತನಕ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೂ ಜುಲೈ ಕೊನೆಯ ತನಕವೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುಂದುವರಿಯುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆಯ ಒಂದೆರಡು ಕಡೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಜುಲೈ 26ರ ತನಕವೂ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮಧ್ಯಮ ಸ್ತರದ ಗಾಳಿ ಹಾಗೂ ಮೋಡಗಳು ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಕಾರಣದಿಂದ ಒಳನಾಡು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಈ ಗಾಳಿಯು ಮಲೆನಾಡು ಭಾಗಗಳಲ್ಲಿ ಮುಂಗಾರು ಮಾರುತದ ಪ್ರಭಾವಕ್ಕೊಳಗಾಗಿ ಕೊಡಗು, ಕೇರಳ, ತಮಿಳುನಾಡು ಮೂಲಕ ಬಂಗಾಳಕೊಲ್ಲಿಗೆ ಪ್ರವೇಶಿಸುತ್ತಿವೆ. ಈ ಕಾರಣದಿಂದ ಕೊಡಗು ಹಾಗೂ ಕೇರಳದಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಇದನ್ನೂ ಓದಿ: Kipi Keerthi: ಕಿಪಿ ಕೀರ್ತಿ ಲವ್‌ ಗೆ ಬಿಲ್ಡಪ್‌ ಕೊಟ್ಟವ ಅಂದರ್ !

Comments are closed.