Bhatkala: ಭಟ್ಕಳ: ವಿದೇಶಿ ನಕಲಿ ಕರೆನ್ಸಿ ಚಲಾವಣೆ ಆರೋಪ: ಮಂಗಳೂರು ಮೂಲದ ಆರೋಪಿಯ ಬಂಧನ!

Share the Article

Bhatkala: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ (Bhatkala) ಬಂದರ್‌ ರಸ್ತೆಯಲ್ಲಿ ನಕಲಿ ವಿದೇಶಿ ಕರೆನ್ಸಿ ಚಲಾವಣೆ ನಡೆಸಿದ ಆರೋಪದಲ್ಲಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರವೀನ್ ಪ್ರಕಾಶ್ ಎಂದು ಗುರುತಿಸಲಾಗಿದೆ. ಈ ಕೃತ್ಯಕ್ಕೆ ಸಂಬಂಧಿಸಿ ಒಂದು ಕಾರು, ಮೊಬೈಲ್ ಫೋನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ (UAE) ದಿರ್ಹಮ್ ಕರೆನ್ಸಿಯ 1000, 500, ಮತ್ತು 100 ಮುಖಬೆಲೆಯ ಒಟ್ಟು 17 ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಪೊಲೀಸರು ಭಟ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಎರಡು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಂಗಳೂರಿನಿಂದ ಭಟ್ಕಳಕ್ಕೆ ಆಗಮಿಸಿದ್ದ ರವೀನ್ ಪ್ರಕಾಶ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ, ಆತನ ಬಳಿಯಿಂದ ಯುಎಇ ದಿರ್ಹಮ್ ನ ನಕಲಿ ಕರೆನ್ಸಿಗಳು ದೊರೆತಿವೆ. ತನಿಖೆಯ ಸಂದರ್ಭದಲ್ಲಿ, ರವೀನ್ ಪ್ರಕಾಶ್‌ನಿಂದ ಒಂದು ಕಾರು ಮತ್ತು ಮೊಬೈಲ್‌ ಫೋನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Tirupati Road: ತಿರುಪತಿಗೆ ರಸ್ತೆ ನಿರ್ಮಿಸಿದ್ದು ಕನ್ನಡಿಗರ ಎಂಬುದು ನಿಮಗೆ ಗೊತ್ತೇ? ಯಾರೆಂದು ಗೊತ್ತಾದ್ರೆ ನಿಜಕ್ಕೂ ಹೆಮ್ಮೆ ಎನಿಸುತ್ತೆ!!

Comments are closed.