Dharmasthala: ಧರ್ಮಸ್ಥಳ ಕೇಸ್ – ದೂರುದಾರ ತೋರಿಸಿದ 15 ಸ್ಥಳಗಳಲ್ಲಿ ಶಸ್ತ್ರ ಸಜ್ಜಿತ ANF ಸಿಬ್ಬಂದಿಯಿಂದ ಬಿಗಿ ಭದ್ರತೆ, ರಾತ್ರಿ ಇಡೀ ಪಹರೆ !!

Dharmasthala : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಕ್ಷಿಪ್ರ ವೇಗವನ್ನು ಪಡೆದುಕೊಳ್ಳುತ್ತಿದೆ. ಎಸ್ಐಟಿ ತಂಡವು(ಜು. 28)ಇಂದು ಅನಾಮಿಕ ವ್ಯಕ್ತಿಯನ್ನು ಧರ್ಮಸ್ಥಳದ ನೇತ್ರಾವತಿಯ ಕಾಡಿಗೆ ಕರೆದೊಯ್ದು ಸ್ಥಳ ಮಹಜರನ್ನು ನಡೆಸಿದ್ದು, ಈ ಸಂದರ್ಭದಲ್ಲಿ ಆ ಮಸುಕುದಾರಿ ದೂರುದಾರ ಸುಮಾರು 15 ಸ್ಥಳಗಳನ್ನು ಗುರುತಿಸಿದ್ದಾನೆ ಎನ್ನಲಾಗಿದೆ.

ಹೌದು, ಧರ್ಮಸ್ಥಳ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಕುರಿತಾಗಿ ದೂರು ನೀಡಿದ್ದ ಅನಾಮಿಕ ವ್ಯಕ್ತಿಯನ್ನು ಇಂದು ( ಜುಲೈ 28 ) ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮಕ್ಕೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಆತ ತಾನು ಹೆಣವನ್ನು ಹೂತಿದ್ದ ಸುಮಾರು 15 ಸ್ಥಳಗಳನ್ನು ಗುರುತಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಅನಾಮಿಕ ವ್ಯಕ್ತಿ ತೋರಿಸಿದ ಜಾಗಗಳನ್ನು ಎಸ್ಐಟಿ ತಂಡ ಗುರುತು ಮಾಡಿಕೊಂಡಿದ್ದು ಇದೀಗ ಆ ಸ್ಥಳಗಳಲ್ಲಿ ತಲಾ ಇಬ್ಬರಂತೆ ಶಸ್ತ್ರ ಸಜ್ಜಿತ ಎಎನ್ಎಫ್ ಸಿಬ್ಬಂದಿಯನ್ನು ರಕ್ಷಣೆಗೆ ನಿಲ್ಲಿಸಲಾಗಿದೆ. ಅವರು ರಾತ್ರಿಪೂರ್ತಿ ಅಲ್ಲಿಯೇ ಭಾರಿ ಇರುತ್ತಾರೆ ಎಂಬುದು ಕೂಡ ದೃಢವಾಗಿದೆ. ಇನ್ನು ಆತ ಗುರುತಿಸಿದ ಸ್ಥಳಗಳಲ್ಲಿ ನಾಳೆ ಅಂದರೆ ಜುಲೈ 29ರಂದು ಉತ್ಖನನ ಕಾರ್ಯ ಕೂಡ ಶುರುವಾಗಲಿದೆ.
Comments are closed.