Mangaluru: ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದ ಗಾಂಜಾ ಸಾಗಾಟ ಪತ್ತೆ; 3 ಆರೋಪಿಗಳ ಬಂಧನ!

Share the Article

Mangaluru: ಮಂಗಳೂರು (Mangaluru) ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ದೊಡ್ಡ ಪ್ರಮಾಣದ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕಾರ್ಯಾಚರಣೆಯಲ್ಲಿ 3 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಕಾಸರಗೋಡು ನಿವಾಸಿಗಳಾದ ಮಸೂದ್ ಎಂಕೆ (45) ಮೊಹಮ್ಮದ್ ಸುಬೇರ್,ಮೊಹಮ್ನದ್ ಆಶೀಕ್ ಎಂದು ತಿಳಿದಿದೆ. ಅವರು ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಸಿಸಿಬಿ ಪೊಲೀಸರು ದಿನಾಂಕ 31-07-2025 ರಂದು 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು, ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಮೇತ 2 ವಾಹನಗಳನ್ನು ಪತ್ತೆಹಚ್ಚಿರುತ್ತಾರೆ.

ಪೊಲೀಸರು ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು 46, 20,000 ರೂ. ಎಂದು ಅಂದಾಜಿಸಲಾಗಿದ್ದು ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ನೋಡಿ: Dharmasthala: ಧರ್ಮಸ್ಥಳ: ಎಂಟನೆ ಸ್ಥಳದಲ್ಲಿಯೂ ಸಿಗದ ಅವಶೇಷಗಳು

Comments are closed.