Darshan Case: ರೇಣುಕಾಸ್ವಾಮಿ ಕೊಲೆ ಪ್ರಕರಣ – ಇಂದು ದರ್ಶನ್ ಮತ್ತು ತಂಡ ಕೋರ್ಟ್ಗೆ ಹಾಜರು

Darshan Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳಾದ ನಟ ದರ್ಶನ್, ನಟಿ ಪವಿತ್ರಾ ಗೌಡ ಹಾಗೂ ಇದಕ್ಕೆ ಸಹಕರಿಸಿದ ಮತ್ತಿತರರು ಇಂದು 57ನೇ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಎಲ್ಲಾ 17ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದು, ವಿಚಾರಣೆಗಾಗಿ ನ್ಯಾಯಾಧೀಶರ ಎದುರು ಕಟಕಟೆಯಲ್ಲಿ ನಿಲ್ಲಲಿದ್ದಾರೆ.

ಇಂದು ಹಾಜರಾದ ಬಳಿಕ ನೇರ ವಕಾಲತಿಗೆ ದಿನಾಂಕ ನಿಗದಿಗೊಳಿಸುವ ಸಾಧ್ಯತೆಯಿದ್ದು, ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಹೈಕೋರ್ಟ್ ನಿಂದ ಜಾಮೀನು ಪಡೆದು ನಿರಾಳರಾಗಿದ್ದ ನಟ ದರ್ಶನ್, ಸೇರುದಂತೆ ಉಳಿದ ಆರೋಪಿಗಳಿಗೆ ಜಾಮೀನು ರದ್ದಾಗುವ ಆತಂಕ ಹೆಚ್ಚಾಗಿದೆ. ಈ ಪ್ರಕರಣದ ವಾದ- ಪ್ರತಿವಾದ ಆಲಿಸಿದ್ದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿ, ಮೂರು ಪುಟಗಳಿಗೆ ಮೀರದಂತೆ ಲಿಖಿತ ರೂಪದಲ್ಲಿ ವಾದ ಮಂಡಿಸಲು 10 ದಿನಗಳ ಕಾಲವಕಾಶ ನೀಡಿತ್ತು.
ಆ. 6 ರಂದು ಆರೋಪಿ ದರ್ಶನ್ ಹಾಗೂ ಪವಿತ್ರ ಗೌಡ ಪರವಾಗಿ ವಕೀಲರು ಲಿಖಿತ ರೂಪದಲ್ಲಿ ಪ್ರಬಲವಾದ ಮಂಡನೆ ಮಾಡಿದ್ದರು. ನಟ ದರ್ಶನ್ ಜಾಮೀನು ರದ್ದುಗೊಳಿಸಬಾರದು ಎಂದು ಮನವಿ ಮಾಡಿರುವ ವಕೀಲರು, ಅದಕ್ಕೆ ಪೂರಕವಾಗಿ ಸಾಕಷ್ಟು ಕಾರಣಗಳನ್ನು ನೀಡಿದ್ದಾರೆ. ಹಾಗೆ ರೇಣುಕಾಸ್ವಾಮಿ ಅಪಹರಣದ ಆರೋಪದಲ್ಲಿ ದರ್ಶನ್ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಲಿಖಿತ ರೂಪದಲ್ಲಿ ವಾದಿಸಿದ್ದರು.
ಮತ್ತೊಂದೆಡೆ ಸುಪ್ರೀಂ ಕೋರ್ಟ್ ನಲ್ಲಿಯೂ ದರ್ಶನ್ ಜಾಮೀನು ರದ್ದುಪಡಿಸುವಂತೆ ರಾಜ್ಯ ಪೊಲೀಸ್ ರು ಸಲ್ಲಿಸಿರುವ ಅರ್ಜಿ ಪ್ರಕರಣವನ್ನು 6 ತಿಂಗಳ ಒಳಗೆ ಇತ್ಯರ್ಥಗೊಳಿಸುವಂತೆ ಗಡವು ನೀಡಲಾಗಿದೆ.
Comments are closed.