Puttur: ಪುತ್ತೂರು: ಅವಿವಾಹಿತ ಯುವತಿ ಬಾವಿಗೆ ಬಿದ್ದು ಮೃತ್ಯು!

Share the Article

Puttur: ಪುತ್ತೂರು ನಿವಾಸಿ ಅವಿವಾಹಿತೆಯೋರ್ವರು ಆ.15ರಂದು ಮಧ್ಯಾಹ್ನ ಮನೆಯಂಗಳದ ಬಾವಿಗೆ ಬಿದ್ದು ಮೃತಪ್ಪಟಿರುವ ಬಗ್ಗೆ ವರದಿಯಾಗಿದೆ.

ಉರ್ಲಾಂಡಿ ನಿವಾಸಿ ಶೇಖರ್ ಅವರ ಸಹೋದರಿ ಆರ್.ಗೀತಾ (59.ವ)ರವರು ಮೃತರು. ಗೀತಾ ಅವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥೆಯಾಗಿದ್ದು, ಔಷಧಿ ಪಡೆಯುತ್ತಿದ್ದರು. ಸಹೋದರ ಶೇಖರ್ ಅವರ ಮನೆಯಲ್ಲಿ ವಾಸ್ತವ್ಯ ಹೊಂದಿದ್ದರು. ಆ.15ರಂದು ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿದ್ದರು. ಬಳಿಕ ಅವರು ಮನೆಯಂಗಳದ ಬಾವಿಗೆ ಬಿದ್ದಿರುವ ಮಾಹಿತಿ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

Dharmasthala Case: ‘ಧರ್ಮಸ್ಥಳ ಚಲೋ’ಗೆ ಚಾಲನೆ – ಬಿಜೆಪಿಯಿಂದ ಅಪಪ್ರಚಾರ ಖಂಡನೆ – ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟ 500ಕ್ಕೂ ಹೆಚ್ಚು ಕಾರುಗಳು

Comments are closed.