Home News HPAIR -2025: ಟೋಕಿಯೋ, ಜಪಾನ್ ಹಾರ್ವರ್ಡ್ HPAIR 2025 ಅಂತರಾಷ್ಟ್ರೀಯ ಶೖಂಗಸಭೆಗ – ಮಡಿಕೇರಿಯ ಯದೀಶ್...

HPAIR -2025: ಟೋಕಿಯೋ, ಜಪಾನ್ ಹಾರ್ವರ್ಡ್ HPAIR 2025 ಅಂತರಾಷ್ಟ್ರೀಯ ಶೖಂಗಸಭೆಗ – ಮಡಿಕೇರಿಯ ಯದೀಶ್ ರಮೇಶ್ ಭಾರತದ ಪ್ರತಿನಿಧಿಯಾಗಿ ಆಯ್ಕೆ

Hindu neighbor gifts plot of land

Hindu neighbour gifts land to Muslim journalist

HPAIR -2025: ನಾರ್ತ್‌ಈಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ಕೊಡಗು ಜಿಲ್ಲೆಯ ಯದೀಶ್ ರಮೇಶ್, ಹಾರ್ವರ್ಡ್ ಪ್ರಾಜೆಕ್ಟ್ ಫಾರ್ ಏಷ್ಯನ್ ಅಂಡ್ ಇಂಟರ್‌ನ್ಯಾಷನಲ್ ರಿಲೇಶನ್ಸ್ (HPAIR) 2025 ಸಮ್ಮೇಳನಕ್ಕೆ ಭಾರತದ ಪ್ರತಿನಿಧಿಗಳಲ್ಲಿ ಒಬ್ಬರಾಗಿ ಆಯ್ಕೆಯಾಗಿದ್ದಾರೆ.

ಮಡಿಕೇರಿ ನಗರಸಭಾ ಸದಸ್ಯ ಕೆ.ಎಸ್. ರಮೇಶ್ ಮತ್ತು ಕೆ.ಆರ್. ರಮ್ಯಾ ಅವರ ಪುತ್ರ.ರಾಗಿರುವ ಯದೀಶ್ ರಮೇಶ್ ಏಷ್ಯಾದಿಂದ ಆಯ್ಕೆಯಾದ ಕೆಲವೇ ಪ್ರತಿನಿಧಿಗಳಲ್ಲಿ ಒಬ್ಬರಾಗಿದ್ದಾರೆ. ಈ ಪ್ರತಿಷ್ಠಿತ ಜಾಗತಿಕ ಸಮ್ಮೇಳನವು ಈ ವರ್ಷ ಆಗಸ್ಟ್ 20 ರಿಂದ 24ರವರೆಗೆ ಜಪಾನ್‌ನ ಟೋಕಿಯೋ ನಗರದಲ್ಲಿ ನಡೆಯಲಿದೆ.

ಇದೇ ವರ್ಷ 2025ರಲ್ಲಿ, ಯದೀಶ್ ರಮೇಶ್ ಅವರು ಜಾಗತಿಕ ವೇದಿಕೆಗಳಲ್ಲಿ ಭಾರತದ ಪ್ರತಿನಿಧಿಯಾಗಿ ಹಲವಾರು ಪ್ರಮುಖ ಸಮಾವೇಶಗಳಲ್ಲಿ ಪಾಲ್ಗೊಂಡಿದ್ದರು. ನ್ಯೂಯಾರ್ಕ್‌ನ ವಿಶ್ವಸಂಸ್ಥೆ ಮುಖ್ಯ ಕಚೇರಿಯಲ್ಲಿ ನಡೆದ ಸಂಯುಕ್ತ ರಾಷ್ಟ್ರಗಳ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ (ECOSOC) ಯುವ ಸಮ್ಮೇಳನದಲ್ಲಿ MGCY ಭಾರತವನ್ನು ಪ್ರತಿನಿಧಿಸಿದ್ದಾರೆ. ಲಾಸ್ ಏಂಜಲೀಸ್‌ನಲ್ಲಿ ನಡೆದ 11ನೇ ಆವೃತ್ತಿಯ ಅಂತರಾಷ್ಟ್ರೀಯ ಯುವ ಸಮ್ಮೇಳನ 2025ರಲ್ಲಿ ಕೂಡ ಯದೀಶ್ ರಮೇಶ್ ಭಾರತದ ಪ್ರತಿನಿಧಿಯಾಗಿದ್ದರು.

ಹಾರ್ವರ್ಡ್ ಕಾಲೇಜಿನಲ್ಲಿ ಕಾರ್ಯನಿರ್ವಹಿಸುವ ಅಂತರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ವಿದ್ಯಾರ್ಥಿ ಸಂಘಟನೆಯಾದ HPAIR, ಏಷ್ಯಾ-ಪ್ರಶಾಂತ ಪ್ರದೇಶದ ಪ್ರಮುಖ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸೂಕ್ತವಾದ ವಿಚಾರ ವಿನಿಮಯ ವೇದಿಕೆಯನ್ನು ಒದಗಿಸುತ್ತದೆ.

ಕಾಲಕ್ರಮೇಣ, HPAIR ಅಂತರಾಷ್ಟ್ರೀಯ ಸಮ್ಮೇಳನಗಳು ಹಾರ್ವರ್ಡ್ ಕಾಲೇಜಿನ ಏಷ್ಯಾ-ಪ್ರಶಾಂತ ಪ್ರದೇಶದಲ್ಲಿ ನಡೆಯುವ ಅತ್ಯಂತ ದೊಡ್ಡ ವಿದ್ಯಾರ್ಥಿಗಳಿಗಾಗಿ ನಡೆಸುವ ವಾರ್ಷಿಕ ಕಾರ್ಯಕ್ರಮಗಳಾಗಿ ರೂಪುಗೊಂಡಿವೆ. ಪ್ರತಿ ವರ್ಷ ಜಾಗತಿಕ ಮಟ್ಟದಲ್ಲಿ ವಿಶಿಷ್ಟ ಗೌರವ ಹೊಂದಿರುವ ಗಣ್ಯರು ಹಾಗೂ ಭವಿಷ್ಯದ ನಾಯಕರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಾರೆ.

HPAIR ನ ನಂಬಿಕೆ ಪ್ರಕಾರ, ಏಷ್ಯಾ-ಪ್ರಶಾಂತ ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕ ವಿಷಯಗಳಲ್ಲಿ ಸಾಮರಸ್ಯ ಕಂಡುಹಿಡಿಯುವುದು ಚುರುಕು ಹಾಗೂ ನವೀನ ಪ್ರಕ್ರಿಯೆಯಾಗಿದ್ದು, ಯದೀಶ್ ಕುಂಬಳತಿಲ್ ರಮೇಶ್ ಅವರಂತಹ ಅರ್ಹ ಪ್ರತಿನಿಧಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಮಾತ್ರ ಇದು ಸಾಧ್ಯವಾಗುತ್ತದೆ. ಅವರ ಹಾಜರಾತಿಯಿಂದ ಏಷ್ಯಾ ಹಾಗೂ ಅಂತರಾಷ್ಟ್ರೀಯ ಸಂಬಂಧಗಳಿಗೆ ಸಂಬಂಧಿಸಿದ ಜಾಗತಿಕ ಸಂವಾದ ಇನ್ನಷ್ಟು ಬಲಗೊಳ್ಳಲಿದೆ.

ಇದು ವೈಯಕ್ತಿಕ ಗೌರವದಷ್ಟೇ ಅಲ್ಲ, ಭಾರತದ ಪ್ರತಿನಿಧಿಯಾಗಿ ಜಾಗತಿಕ ಚರ್ಚೆಗಳಲ್ಲಿ ಭಾಗವಹಿಸುವ ಅಪೂರ್ವ ಅವಕಾಶವೂ ಹೌದು. ಈ ಸಾಧನೆ ಸಾಧ್ಯವಾಗಲು ನೆರವಾದ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮತ್ತು ಮೂಡ ಅಧ್ಯಕ್ಷ ರಾಜೇಶ್ ಯಲ್ಲಪ್ಪ , ಕರ್ನಾಟಕ ಸರ್ಕಾರದ ಬೆಂಬಲ, ಪ್ರೋತ್ಸಾಹ ಮತ್ತು ಮಾರ್ಗದರ್ಶನ ಪ್ರಮುಖವಾಗಿದೆ ಎಂದು ಯದೀಶ್ ರಮೇಶ್ ಹೇಳಿದರು.

BPL Card: ರಾಜ್ಯದ ಜನತೆಗೆ ಗುಡ್ ನ್ಯೂಸ್ – ಇನ್ಮುಂದೆ 24 ಗಂಟೆಯಲ್ಲಿ ಸಿಗುತ್ತೆ BPL ಕಾರ್ಡ್ !!