Eshwar khandre: ಅದ್ದೂರಿಯಾಗಿ ಗಣೇಶೋತ್ಸವ ಆಚರಿಸುವವರಿಗೆ ಸಚಿವ ಈಶ್ವರ ಖಂಡ್ರೆ ಮಹತ್ವದ ಕರೆ!

Eshwar khandre: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಮಹತ್ವ ನೀಡುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ (Eshwar khandre) ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಗಣೇಶ ಹಬ್ಬವನ್ನು ಪರಿಸರ ಸ್ನೇಹಿ ಮಣ್ಣಿನ ಗಣಪತಿಯೊಂದಿಗೆ ಆಚರಿಸುವಂತೆ ಕರೆ ನೀಡಿದರು. ಜಲಮೂಲಗಳ ರಕ್ಷಣೆಗಾಗಿ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ ಮತ್ತು ವಿಸರ್ಜನೆಯ ಮೇಲೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ ಎಂದು ಅವರು ಘೋಷಿಸಿದರು.
“ನಮ್ಮ ರಾಜ್ಯದ ನದಿ, ಕೆರೆ, ಮತ್ತು ಇತರ ಜಲಮೂಲಗಳ ಜೀವಸಂಕುಲವನ್ನು ರಕ್ಷಿಸುವುದು ನಮ್ಮ ಆದ್ಯತೆಯಾಗಿದೆ” ಎಂದು ಸಚಿವ ಖಂಡ್ರೆ ಹೇಳಿದರು. “ಪಿಒಪಿ ಮೂರ್ತಿಗಳು ನೀರಿನಲ್ಲಿ ಕರಗದೆ ಉಳಿಯುವುದರಿಂದ ಮತ್ತು ಅವುಗಳಿಗೆ ಬಳಸುವ ರಾಸಾಯನಿಕಯುಕ್ತ ಬಣ್ಣಗಳು ಜಲಚರಗಳಿಗೆ ವಿಷಕಾರಿಯಾಗುತ್ತವೆ. ಇದರಿಂದಾಗಿ ನೀರು ವಿಷಪೂರಿತವಾಗುತ್ತದೆ. ಈ ಗಂಭೀರ ಪರಿಸ್ಥಿತಿಯನ್ನು ಪರಿಗಣಿಸಿ, ಸರ್ಕಾರವು ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯಿದೆ 1974ರ ಸೆಕ್ಷನ್ 33(ಎ) ಅಡಿಯಲ್ಲಿ ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದೆ.”
ಈ ನಿಷೇಧವು ರಾಜ್ಯಾದ್ಯಂತ ಜಾರಿಗೆ ಬರುವಂತೆ, ಸ್ಥಳೀಯ ಆಡಳಿತ ಮಂಡಳಿಗಳಿಗೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.
Comments are closed.