CM Siddaramiah : ಧರ್ಮಸ್ಥಳ ಪ್ರಕರಣ – ಯಾವ ಪ್ರತಿಕ್ರಿಯೆ ನೀಡದಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

C M Siddaramiah : ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳ ಪ್ರಕರಣ ತನಿಖೆಯ ಹಂತದಲ್ಲಿದೆ. ಈ ನಡುವೆ ಈ ವಿಚಾರ ರಾಜಕೀಯ ಬಣ್ಣವನ್ನು ಪಡೆದುಕೊಂಡಿದೆ. ಬೇರೆ ಬೇರೆ ಪಕ್ಷದ ನಾಯಕರು ಈ ಕುರಿತಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಇದೀಗ ಸಿದ್ದರಾಮಯ್ಯ ಅವರು ತಮ್ಮ ಸಚಿವರು ಹಾಗೂ ಇತರ ನಾಯಕರುಗಳಿಗೆ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡದಂತೆ ಆದೇಶ ಮಾಡಿದ್ದಾರೆ.

ಹೌದು, ಧರ್ಮಸ್ಥಳದ ಅಸ್ಥಿಪಂಜರ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಸದನದಲ್ಲಿ ನಡೆದ ಗಂಭೀರ ಚರ್ಚೆಯ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗೆ ಪ್ರಮುಖ ಸೂಚನೆ ನೀಡಿದ್ದಾರೆ. ಸಿಎಂ ಅವರು, “ಯಾವುದೇ ಸಚಿವರು ಅನಗತ್ಯ ಹೇಳಿಕೆ ನೀಡಬಾರದದು ಎಂದು ತಾಕಿತು ಮಾಡಿದ್ದಾರೆ
ತಮ್ಮ ವೈಯಕ್ತಿಕ ಅಭಿಪ್ರಾಯ ಮತ್ತು ಸಚಿವರ ಅಭಿಪ್ರಾಯದ ನಡುವೆ ವ್ಯತ್ಯಾಸವಿದೆ ಎಂಬುದನ್ನು ಗಮನದಲ್ಲಿರಿಸಿಕೊಳ್ಳಬೇಕು. ಸರ್ಕಾರದ ನಿಲುವು ವಿಧಾನಸೌಧದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಗೃಹ ಸಚಿವ ಪರಮೇಶ್ವರ್ ಈ ವಿಷಯದಲ್ಲಿ ಮುಂಚೂಣಿ ವಹಿಸಿ ಉತ್ತರಿಸಬೇಕು, ಉಳಿದ ಸಚಿವರು ಹೇಳಿಕೆ ನೀಡುವುದನ್ನು ದೂರವಿರಬೇಕು” ಎಂದು ಎಚ್ಚರಿಕೆ ನೀಡಿದ್ದಾರೆ.
Viral Video: ಅನಾರೋಗ್ಯ ಪೀಡಿತ ಪತ್ನಿಯನ್ನು ‘ಜೀವಂತ ಸಮಾಧಿ’ ಮಾಡಲು ಮುಂದಾದ ಮುದುಕ – ಭಯಾನಕ ವಿಡಿಯೋ ವೈರಲ್
Comments are closed.