DK Shivkumar: ವಿಧಾನಸಬೆಯಲ್ಲಿ RSS ‘ನಮಸ್ತೆ ಸದಾ ವತ್ಸಲೆ’ ಗೀತೆ ಹಾಡಿದ ಡಿಕೆ ಶಿವಕುಮಾರ್ !! ವಿಡಿಯೋ ವೈರಲ್

DK Shivkumar : ಕಾಂಗ್ರೆಸ್ ನಾಯಕ, ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಆರ್ ಎಸ್ ಎಸ್ (RSS) ಗೀತೆಯನ್ನು ಹಾಡಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೌದು, ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದಾರೆ. ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರ್ಎಸ್ಎಸ್ ಗೀತೆಯನ್ನು ಹಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು.
‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂಬ ಆರ್ಎಸ್ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಕೇಳಿದ ಸದನವು ಹಠಾತ್ ಸ್ಥಬ್ಧಗೊಂಡಿತು. ಡಿ ಕೆ ಶಿವಕುಮಾರ್ ಕಾಲ್ತುಳಿತದ ಪ್ರೋತ್ಸಾಹಕ ಎಂದು ಆರೋಪಿಸಿ ಸಾಮೂಹಿಕ ಕೋಲಾಹಲವನ್ನು ಸೃಷ್ಟಿಸಿದಾಗ ಡಿ ಕೆ ಶಿವಕುಮಾರ್ ಅವರು ಕವಿತೆ ವಾಚಿಸಿದರು.
ಈ ವೇಳೆ ವಿರೋಧ ಪಕ್ಷದ ಸದಸ್ಯರು ಮೇಜು ಕುಟ್ಟಿ ಸಂತಸ ವ್ಯಕ್ತಪಡಿಸಿದರು. ಆಡಳಿತ ಪಕ್ಷದ ಸದಸ್ಯರಿಂದ ಯಾವುದೇ ಪ್ರತಿಕ್ರಿಯೆ ಇರಲಿಲ್ಲ.
‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂಬ ಆರ್ಎಸ್ಎಸ್ ಗೀತೆಯ ಮೊದಲ ಕೆಲವು ಸಾಲುಗಳನ್ನು ಕೇಳಿದ ಸದನದಲ್ಲಿ ನಾಯಕರು ಒಂದು ಕ್ಷಣ ಅಚ್ಚರಿಯಾದರು.@XpressBengaluru @DKShivakumar pic.twitter.com/DKsUumsLiA
— kannadaprabha (@KannadaPrabha) August 22, 2025
Sameer MD: ಜಾಮೀನು ಸಿಕ್ಕರೂ ತಪ್ಪದ ಸಂಕಷ್ಟ – ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು!!
Comments are closed.