

G Parameshwar: ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಚಾರ ಮಾಡಲು ನಮ್ಮ ದೇಶದ ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ ವಿದೇಶಿಗರನ್ನು ಕರೆಯಬೇಡಿ ಎಂದು ಸೂಚನೆ ನೀಡಿದ್ದೇವೆ. ಈ ವಿಚಾರವನ್ನು ಪೊಲೀಸ್ ಇಲಾಖೆಯ ಮೂಲಕ ಮಿಲಾದುನ್ನಬಿ ಕಾರ್ಯಕ್ರಮದ ಆಯೋಜಕರ ಗಮನಕ್ಕೆ ತರಲಾಗಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.












