Karnataka Ratna: ಇದುವರೆಗೆ “ಕರ್ನಾಟಕ ರತ್ನ ಪ್ರಶಸ್ತಿ” ಯಾರಿಗೆಲ್ಲ ದೊರಕಿದೆ ?

Karnataka Ratna: ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿಯನ್ನು ಮೊದಲ ಬಾರಿಗೆ 1991 ರಲ್ಲಿ ಆರಂಭಿಸಲಾಯಿತು. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ.

ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಹಾಗೇಯೆ ಕನ್ನಡ ರಾಜ್ಯೋತ್ಸವದ ಸಂದಂರ್ಭದಲ್ಲಿ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ‘ಕರ್ನಾಟಕ ರತ್ನ ಪ್ರಶಸ್ತಿಯು ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ.
‘ಕರ್ನಾಟಕ ರತ್ನ’ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ:
ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಅವರಿಗೆ ನೀಡಿ ಗೌರವಿಸಲಾಯಿತು. ಈ ಬಾರಿ ಅಂದರೆ 2025ರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಚಿತ್ರನಟ ಡಾ. ವಿಷ್ಣುವರ್ಧನ್ ಮತ್ತು ಬಿ. ಸರೋಜದೇವಿ ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಇದನ್ನೂ ಓದಿ:BCCI: ‘BCCI’ ಮುಂದಿನ ಅಧ್ಯಕ್ಷರಾಗಿ ಸಚಿನ್ ತೆಂಡೂಲ್ಕರ್ ಆಯ್ಕೆ.?
ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ:
ಕುವೆಂಪು – ಸಾಹಿತ್ಯ – 1992
ಡಾ. ರಾಜ್ಕುಮಾರ್ – ಚಲನಚಿತ್ರ – 1992
ಎಸ್.ನಿಜಲಿಂಗಪ್ಪ – ರಾಜಕೀಯ – 1999
ಸಿ.ಎನ್.ಆರ್.ರಾವ್ – ವಿಜ್ಞಾನ – 2000
ದೇವಿಪ್ರಸಾದ್ ಶೆಟ್ಟಿ – ವೈದ್ಯಕೀಯ – 2001
ಭೀಮಸೇನ ಜೋಷಿ – ಸಂಗೀತ – 2005
ಶ್ರೀ ಶಿವಕುಮಾರ ಸ್ವಾಮೀಗಳು – ಸಾಮಾಜಿಕ ಸೇವೆ – 2007
ದೇ. ಜವರೇಗೌಡ – ಸಾಹಿತ್ಯ -2008
ಡಿ. ವೀರೇಂದ್ರ ಹೆಗ್ಗಡೆ – ಸಾಮಾಜಿಕ ಸೇವೆ – 2009.
ದಿ. ಪುನೀತ್ ರಾಜ್ಕುಮಾರ್- ಸಿನಿಮಾ ಹಾಗೂ ಸಾಮಾಜಿಕ ಸೇವೆ -2021
ಬಿ. ಸರೋಜದೇವಿ -ಚಲನಚಿತ್ರ-2025
ಡಾ. ವಿಷ್ಣುವರ್ಧನ್ -ಚಲನಚಿತ್ರ -2025
Comments are closed.