Dasara: ಮೊದಲ ಬಾರಿ ‘ದಸರಾ ಉದ್ಘಾಟನೆ’ ಮಾಡಿದ್ದು ಯಾರು ಗೊತ್ತಾ?

Share the Article

Dasara: ಕನ್ನಡಿಗರ ನಾಡಹಬ್ಬ ಮೈಸೂರು ದಸರಾ ಆಚರಣೆಗೆ ಎಷ್ಟೋ ಶತಮಾನಗಳ ಇತಿಹಾಸವಿದೆ. ಹೌದು, 14ನೇ ಶತಮಾನದಿಂದಲೂ ಮೈಸೂರಿನಲ್ಲಿ ದಸರಾ (Dasara)ಆಚರಣೆ ಅದ್ಧೂರಿಯಾಗಿ ನಡೆಯುತ್ತಿದೆ. ಈ ಬಾರಿಯೂ ಸಹ ದಸರಾ ಅದ್ಧೂರಿಯಾಗಿ ನಡೆಯಲಿದೆ. ಆದರೆ ಈ ಬಾರಿ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಸರ್ಕಾರವು ಆಹ್ವಾನ ನೀಡಿರುವುದಕ್ಕೆ ಕೆಲವರ ವಿರೋಧ ವ್ಯಕ್ತವಾಗಿದೆ.

ಆದ್ರೆ ಈ ‘ದಸರಾ ಉದ್ಘಾಟನೆ’ ಎಂಬುದಕ್ಕೆ ಪ್ರಾಮುಖ್ಯತೆ ದೊರೆತಿದ್ದು ಡಾ ರಾಜ್​​ಕುಮಾರ್ ಅವರಿಂದ. ಹೌದು, ಯಾಕೆಂದರೆ ದಸರಾ ವನ್ನು ಮೊದಲ ಬಾರಿ ‘ಉದ್ಘಾಟನೆ’ ಮಾಡಿದ್ದು ಡಾ ರಾಜ್​​ಕುಮಾರ್.

ದಸರಾ ಉದ್ಘಾಟನೆ ಹೇಗೆ ಆರಂಭ ಆಯಿತು:

ಮಾಹಿತಿ ಪ್ರಕಾರ 1993ಕ್ಕೆ ಮುಂಚೆ ದಸರಾ ಉದ್ಘಾಟನೆ ಮಾಡುವ ಸಂಪ್ರದಾಯ ಇರಲಿಲ್ಲ. ಅದಕ್ಕೂ ಮುಂಚೆ ಜಂಬೂ ಸವಾರಿಗೆ ಮುಂಚೆ ಚಿನ್ನದ ಅಂಬಾರಿಗೆ ಮುಖ್ಯ ಮಂತ್ರಿ ಆಗಿದ್ದವರು ಪುಷ್ಪಾರ್ಚನೆ ಮಾಡುವ ಸಂಪ್ರದಾಯ ಇತ್ತು. ಆದರೆ 1993 ರಲ್ಲಿ ನೆರೆಯ ಮಹಾರಾಷ್ಟ್ರದ ಲಾಥೋರ್​​ನಲ್ಲಿ ಭಾರಿ ಭೂಕಂಪನ ಆಗಿತ್ತು. ಸುಮಾರು 10 ಸಾವಿರ ಜನ ನಿಧನ ಹೊಂದಿದ್ದರು. 10 ಲಕ್ಷ ಜನ ಮನೆ-ಮಠ ಕಳೆದುಕೊಂಡಿದ್ದರು. ನೆರೆ ರಾಜ್ಯದಲ್ಲಿ ವಿಪತ್ತು ಸಂಭಿಸಿದ್ದ ಕಾರಣ ರಾಜ್ಯದಲ್ಲಿ ದಸರಾ ಆಚರಣೆ ಬೇಡ ಎಂಬ ಕೂಗು ಎದ್ದಿತ್ತು.

ಇದನ್ನೂ ಓದಿ:Automobile: 3ನೇ ಅತಿದೊಡ್ಡ ಆಟೋಮೊಬೈಲ್ ಮಾರುಕಟ್ಟೆ: ಜಪಾನ್‌ ದೇಶವನ್ನು ಹಿಂದಿಕ್ಕಿದ ಭಾರತ – ನಿತಿನ್ ಗಡ್ಕರಿ

ಆಗ ಸಿಎಂ ಆಗಿದ್ದವರು ವೀರಪ್ಪ ಮೋಯ್ಲಿ. ಸಂಪ್ರದಾಯಬದ್ಧವಾಗಿ ಆಚರಿಸಿಕೊಂಡು ಬಂದಿರುವ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದಸರಾ ಅನ್ನು ನಿಲ್ಲಿಸುವುದು ಬೇಡ ಎಂಬ ನಿರ್ಧಾರವನ್ನು ಮಾಡಿದರು. ಅಂತಹ ಇಕ್ಕಟ್ಟಿನ ಪರಿಸ್ಥಿತಿ ಯಲ್ಲಿ ವೀರಪ್ಪ ಮೋಯ್ಲಿ ಅವರು ಡಾ ರಾಜ್​​ಕುಮಾರ ಅವರನ್ನು ದಸರಾ ಉದ್ಘಾಟನೆಗೆಂದು ಆಹ್ವಾನಿಸಿದರು. ಆಗ ರಾಜ್​​ಕುಮಾರ್ ಅವರ ಆಗಮನದಿಂದ ದಸರಾ ಆಚರಣೆಗೆ ಇದ್ದ ವಿರೋಧ ಶಾಂತವಾಯಿತು. ಸುಸೂತ್ರವಾಗಿ ಹಿಂದಿಗಿಂತಲೂ ಅದ್ಧೂರಿಯಾಗಿ ದಸರಾ ಆಚರಣೆ ನಡೆಯಿತು. ಹೀಗೆ ರಾಜ್​​ಕುಮಾರ್ ಉದ್ಘಾಟನೆ ಮಾಡಿದ ಬಳಿಕ, ಪ್ರತಿವರ್ಷವೂ ಯಾರನ್ನಾದರೂ ಗಣ್ಯರನ್ನು, ಸಾಹಿತಿಗಳನ್ನು ಕರೆಸಿ ದಸರಾ ಉದ್ಘಾಟಿಸುವ ಸಂಪ್ರದಾಯ ಆರಂಭವಾಯ್ತು ಎನ್ನಲಾಗಿದೆ.

Comments are closed.