Dasara Inaugration: ಬಾನು ಮುಷ್ತಾಕ್ ʼಮೈಸೂರು ದಸರಾʼ ಉದ್ಘಾಟನೆ ಪ್ರಶ್ನೆ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್

Dasara Inaugration: ದಸರಾ ಉದ್ಘಾಟನೆಗೆ ʼಬಾನು ಮುಷ್ತಾಕ್ʼ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಸೆ.22 ರಂದು ದಸರಾ ಉದ್ಘಾಟನೆ ನಡೆಯಲಿದ್ದು, ಆದ್ದರಿಂದ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಲಾಗಿತ್ತು.
ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ನಂತರ ಇದು ಸುಪ್ರೀಂ ಅಂಗಳಕ್ಕೆ ಹೋಗಿತ್ತು. ಇದೀಗ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:Dasara Holiday: ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆಯಿಂದ (ಸೆ.20) ಅ.7 ರವರೆಗೆ ದಸರಾ ರಜೆ ಘೋಷಣೆ
Comments are closed.