NIA: ಮೋದಿ ರಾಷ್ಟ್ರಧ್ವಜ ಹಾರಿಸೋದನ್ನ ತಡೆಯಲು ಬಹುಮಾನ ಘೋಷಿಸಿದ್ದ ‘ಪನ್ನುನ್’ ವಿರುದ್ಧ NIA ಕೇಸ್

NIA: ಆಗಸ್ಟ್ 10 ರಂದು ಲಾಹೋರ್ನ ಪ್ರೆಸ್ ಕ್ಲಬ್ನಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪನ್ನುನ್ ಪ್ರಚೋದನಕಾರಿ ಘೋಷಣೆ ಮಾಡಿದ್ದ. ಭಾಷಣ ದಲ್ಲಿ “ಆ.15 ಸ್ವಾತಂತ್ರ್ಯ ದಿನದಂದು (Independence day) ಕೆಂಪುಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಷ್ಟ್ರಧ್ವಜ ಹಾರಿಸುವುದನ್ನ ತಡೆಯಲು ಸಿಖ್ಖ್ ಸೈನಿಕರಿಗೆ 11 ಕೋಟಿ ರೂ. ಬಹುಮಾನ ನೀಡುವುದಾಗಿ” ಘೋಷಿಸಿದ್ದ. ಇದೀಗ ಈ ಕುರಿತಂತೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ವಿರುದ್ಧ ಎನ್ಐಎ (NIA) ಪ್ರಕರಣ ದಾಖಲಿಸಿಕೊಂಡಿದೆ.

ಇದನ್ನೂ ಓದಿ:BJP: ‘ಬಿಜೆಪಿ ಸರ್ಕಾರ’ದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ರದ್ದು
ಸದ್ಯ ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ಭಾರತದ (India) ವಿರುದ್ಧ ಸಿಖ್ಖರಲ್ಲಿ ಅಸಮಾಧಾನ ಹರಡಿದ್ದಕ್ಕಾಗಿ ಪನ್ನುನ್ ವಿರುದ್ಧ ಎನ್ಐಎ ಪ್ರಕರಣ ದಾಖಲಿಸಿದೆ.
Comments are closed.