Bangalore: ಬೆಂಗಳೂರು: ಸ್ಥಳೀಯ ಸಂಸ್ಥೆ ವ್ಯಾಪ್ತಿ ಕಟ್ಟಡಕ್ಕೂ ‘OC’ ವಿನಾಯಿತಿಗೆ ನಿರ್ಧಾರ

Share the Article

 

Bangalore: ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ಮುಂದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಾಣ ಮಾಡಿದ ನೆಲ ಅಂತಸ್ತು, ಎರಡು ಅಂತಸ್ತು, ಸ್ಟಿಲ್ಟ್ ಮತ್ತು ಮೂರು ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ವಿನಾಯಿತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ, ಕರ್ನಾಟಕ ಪುರಸಭೆಗಳ ಅಧಿನಿಯಮದಡಿ ಪುರಸಭೆಗಳ ವ್ಯಾಪ್ತಿಯಲ್ಲಿ ವಿನಾಯಿತಿ ಕೋರಲಾಗುವುದು. ಈ ವೇಳೆ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿದ ಕಟ್ಟಡಗಳಿಗೆ ಮಾತ್ರ ವಿನಾಯಿತಿ ಕೋರಲಿದ್ದು, ಸಂಪುಟ ಸಭೆಯಲ್ಲಿ ನಕ್ಷೆ ಮಂಜೂರಾತಿ ಪಡೆಯದ ಕಟ್ಟಡಗಳಿಗೂ ಅನುಮೋದನೆ ನೀಡುವ ಸಾಧ್ಯತೆ ಇದೆ.

Comments are closed.