C M Siddaramaiah: ನಿರ್ಬಂಧ ಕೇವಲ RSSಗೆ ಮಾತ್ರವಲ್ಲ, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Share the Article

C M Siddaramaiah: ಸರಕಾರಿ ಜಾಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ-ಸಂಸ್ಥೆಗಳು ಕಾರ್ಯಕ್ರಮ, ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್‌.ಎಸ್‌.ಎಸ್‌ಗೆ ಮಾತ್ರ ನಿರ್ಬಂಧ ಅಲ್ಲ, ಯಾವುದೇ ಸಂಘ ಸಂಸ್ಥೆಗಳು ಸರಕಾರಿ ಜಾಗ, ಸಾರ್ವಜನಿಕ ಸ್ಥಳ, ಉದ್ಯಾನಗಳಲ್ಲಿ ಕಾರ್ಯಕ್ರಮ ನಡೆಸುವಂತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ, ಸಿಎಂ ಸಿದ್ದರಾಮಯ್ಯ ನಿರ್ಬಂಧ ಕೇವಲ ಆರ್‌.ಎಸ್‌.ಎಸ್‌ಗೆ ಮಾತ್ರ ಅನ್ವಯ ಅಲ್ಲ, ಎಲ್ಲಾ ಸಂಘ-ಸಂಸ್ಥೆಗಳಿಗೂ ನಿರ್ಬಂಧ ಅನ್ವಯವಾಗುತ್ತದೆ ಎಂದು ಹೇಳಿದರು.

ಆರ್‌.ಎಸ್‌.ಎಸ್‌ ಮಾತ್ರಲವಲ್ಲ, ಯಾವುದೇ ಸಂಘ-ಸಂಸ್ಥೆಗಳು ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳು, ಸಾರ್ವಜನಿಕ ಸ್ಥಳಗಳು, ಉದ್ಯಾನವನ, ಸರಕಾರಿ ಕಟ್ಟಡ ಜಾಗಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಈ ಕುರಿತು ಜಗದೀಶ್‌ ಶೆಟ್ಟರ್‌ ಅವರು 2013 ರಲ್ಲಿ ಆದೇಶ ಹೊರಡಿಸಲಾಗಿತ್ತು. ಬಿಜೆಪಿ ಸರಕಾರ ಆದೇಶವನ್ನೇ ಈಗ ನಾವು ಎತ್ತಿ ಹಿಡಿದಿದ್ದೇವೆ. ಬಿಜೆಪಿ ಮಾಡಿರುವ ಆದೇಶವನ್ನು ಅವರು ವಿರೋಧ ಮಾಡಿದರೆ ಹೇಗೆ? ಎಂದು ಪ್ರಶ್ನೆ ಮಾಡಿದರು.

Comments are closed.