Karnataka Police: ಕರ್ತವ್ಯದ ಸಮಯದಲ್ಲಿ ಹೇಗಿರಬೇಕು? ಪೊಲೀಸ್‌ ಅಧಿಕಾರಿಗಳಿಗೆ ಹೊಸ ಮಾರ್ಗಸೂಚಿ

Share the Article

Karnataka Police: ಪೊಲೀಸ್‌ ಇಲಾಖೆ ಕುರಿತು ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್‌ ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳಲು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ.

ಪ್ರಮುಖ ಸೂಚನೆಗಳು:
-ಪೊಲೀಸ್ ಠಾಣೆಗೆ ಭೇಟಿ ನೀಡುವ ಯಾವುದೇ ವ್ಯಕ್ತಿಯ ಸಾಮಾಜಿಕ ಅಥವಾ ಆರ್ಥಿಕ ಹಿನ್ನೆಲೆ ಗಮನಿಸದೇ ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕು.

– ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಅಥವಾ ವರ್ತನೆ ತೋರದೆ ಸೌಜನ್ಯ ಮತ್ತು ಘನತೆಯಿಂದ ವರ್ತಿಸಬೇಕು. ಕಾನೂನು ಜಾರಿಗೊಳಿಸುವಲ್ಲಿ ದೃಢತೆಯನ್ನು ಪ್ರದರ್ಶಿಸಬೇಕು.

– ಯಾವುದೇ ಸಂದರ್ಭದಲ್ಲೂ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳಿಂದ ಯಾವುದೇ ರೀತಿಯ ಬೇಡಿಕೆ ಇಡುವುದರಿಂದ ಅಥವಾ ಯಾವುದೇ ಅಕ್ರಮ ಸಹಾಯ/ಲಾಭವನ್ನು ಸ್ವೀಕರಿಸುವುದರಿಂದ ಸಂಪೂರ್ಣವಾಗಿ ದೂರವಿರಬೇಕು.

– ಕರ್ತವ್ಯದ ಸಮಯದಲ್ಲಿ/ಕರ್ತವ್ಯ ಮುಗಿದ ನಂತರವೂ ನೈತಿಕವಾಗಿ ಇತರರಿಗೆ ಮಾದರಿಯಾಗುವಂತೆ ಇದ್ದು ಇಲಾಖೆಯ ನೀತಿ-ನಿಯಮಗಳನ್ನು ಎತ್ತಿಹಿಡಿಯಬೇಕು.

– ಸಮವಸ್ತ್ರದ ಮೇಲೆ ಧರಿಸುವ ಕ್ಯಾಮೆರಾಗಳನ್ನು ಮತ್ತು ಲಭ್ಯವಿರುವ ತಂತ್ರಜ್ಞಾನಗಳನ್ನು ಜವಾಬ್ದಾರಿಯುತವಾಗಿ ಬಳಸಿಕೊಳ್ಳಬೇಕು.

– ಮಹಿಳೆಯರನ್ನು ಸಂಜೆ 6ರ ನಂತರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಅಥವಾ ಹೇಳಿಕೆ ನೀಡಲು ಕರೆತರಬಾರದು.

Comments are closed.