Mangalore: ಯಕ್ಷಗಾನ ಕಲಾವಿದರ ಕುರಿತು ಆಕ್ಷೇಪಾರ್ಹ ಹೇಳಿಕೆ: ಪ್ರೊ.ಪುರುಷೋತ್ತಮ್ ಬಿಳಿಮಲೆ ವಿರುದ್ಧ ದೂರು ದಾಖಲು

Mangalore: ಯಕ್ಷಗಾನ ಕಲಾವಿದರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರೊ.ಪುರುಷೋತ್ತಮ್ ಬಿಳಿಮಲೆ ವಿರುದ್ಧ ದೂರು ದಾಖಲಾಗಿದೆ.

ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಯಕ್ಷಗಾನ ಕಲಾವಿದರೊಬ್ಬರು ದೂರು ದಾಖಲು ಮಾಡಿದ್ದಾರೆ. ಯಕ್ಷಗಾನ ಕಲಾವಿದರ ಬಗ್ಗೆ ಬಿಳಿಮಲೆ ಆಕ್ಷೇಪಾರ್ಹ ಪದ ಪ್ರಯೋಗ ಮಾಡಿದ್ದಲ್ಲದೇ ಕಲಾವಿದ್ರನ್ನ ತೇಜೋವಧೆ ಮಾಡಿದ್ದಾರೆ. ಇದು ಕಲಾವಿದರ ಭಾವನೆಗಳಿಗೆ ಧಕ್ಕೆ ತಂದಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಲಾವಿದ ರವಿ ಅಲೆವೂರಾಯ ದೂರು ನೀಡಿರುವ ಕುರಿತು ವರದಿಯಾಗಿದೆ.
Comments are closed.