ಶಾಂತಿಮೊಗರು : ಕೆಎಸ್‌ಆರ್‌ಟಿಸಿ ಬಸ್ -ಕಾರು ಡಿಕ್ಕಿ

Share the Article

ಕಡಬ : ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ.

ಶಾಂತಿಮೊಗರು ಮಾರ್ಗವಾಗಿ ಕಡಬಕ್ಕೆ ತೆರಳುತ್ತಿದ್ದ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕ್ರೆಟಾ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಎದುರು ಭಾಗ ನುಜ್ಜುಗುಜ್ಜಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ ಎಂದು ತಿಳಿದುಬಂದಿದೆ.

Leave A Reply