Home News ದ.ಕ. : ಕಾಂಗ್ರೆಸ್ಸಿನಿಂದ ಮಂಜುನಾಥ ಭಂಡಾರಿ ವಿಧಾನಪರಿಷತ್‌ಗೆ ಅಭ್ಯರ್ಥಿ

ದ.ಕ. : ಕಾಂಗ್ರೆಸ್ಸಿನಿಂದ ಮಂಜುನಾಥ ಭಂಡಾರಿ ವಿಧಾನಪರಿಷತ್‌ಗೆ ಅಭ್ಯರ್ಥಿ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ರಾಜೇಂದ್ರ ಕುಮಾರ್ ಕಣದಿಂದ ಹಿಂದಕ್ಕೆ ಸರಿದಿದ್ದು,ಕಾಂಗ್ರೆಸ್ ಅಭ್ಯರ್ಥಿಯಾಗಿ ಸಹ್ಯಾದ್ರಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರಾದ ಮಂಜುನಾಥ್ ಭಂಡಾರಿ ಸ್ಪರ್ಧಿಸುವ ಸಾಧ್ಯತೆ ನಿಚ್ಚಳವಾಗಿದೆ.ಈ ಕುರಿತು ಅಧಿಕೃತವಾಗಿ ಕೆಪಿಸಿಸಿ ಪಟ್ಟಿ ಬಿಡುಗಡೆ ಮಾಡಲಿದೆ.ಕಾಂಗ್ರೆಸ್‌‌ನಿಂದ 11 ಮಂದಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಉಮೇದು ಹೊಂದಿದ್ದರು.ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮಂಜುನಾಥ ಭಂಡಾರಿ ಅವರಿಗೆ ಟಿಕೆಟ್ ನೀಡುವ ಕುರಿತಾಗಿ ಮಾತುಕತೆ ‌ನಡೆದಿದೆ ಎನ್ನಲಾಗಿದೆ.

ಈಗಾಗಲೇ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದಾರೆ.ದಕ್ಷಿಣ ಕನ್ನಡ – ಉಡುಪಿ ದ್ವಿಸ್ಥಾನದಿಂದ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.

ಮಂಜುನಾಥ್ ಭಂಡಾರಿ ಅವರು ಶಿವಮೊಗ್ಗದಿಂದ ಲೋಕಸಭಾ ಅಭ್ಯರ್ಥಿಯಾಗಿ ಈ ಹಿಂದೆ ಸ್ಪರ್ಧಿಸಿದ್ದರು.

ವೇದಿಕೆಗೆ ಬಂದ ಮೇಲೆ ಏನಾದರೂ ಮಾತನಾಡಬೇಕಲ್ಲಾ -ಸೋಮಶೇಖರ್ ಹೇಳಿಕೆಗೆ ರಾಜೇಂದ್ರ ಕುಮಾರ್ ಪ್ರತಿಕ್ರಿಯೆ