Home latest ಬೆಳ್ತಂಗಡಿ :ರಬ್ಬರ್ ತೋಟದಲ್ಲಿ ಕಂಡು ಬಂದ ಸುಮಾರು 8 ರಿಂದ 9 ಅಡಿ ಉದ್ದದ ಮೊಸಳೆ|ಸ್ಥಳೀಯರಿಂದ...

ಬೆಳ್ತಂಗಡಿ :ರಬ್ಬರ್ ತೋಟದಲ್ಲಿ ಕಂಡು ಬಂದ ಸುಮಾರು 8 ರಿಂದ 9 ಅಡಿ ಉದ್ದದ ಮೊಸಳೆ|ಸ್ಥಳೀಯರಿಂದ ಅರಣ್ಯ ಇಲಾಖೆ
ಅಧಿಕಾರಿಗಳಿಗೆ ಮಾಹಿತಿ

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ : ರಬ್ಬರ್ ತೋಟವೊಂದರಲ್ಲಿ ಸುಮಾರು 8 ರಿಂದ 9 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ಕಡಿರುದ್ಯಾವರ ಗ್ರಾಮದ ಕಾನರ್ಪ ಸಮೀಪದ ಕುದೂರು ಎಂಬಲ್ಲಿ ನಡೆದಿದೆ.

ಕುದೂರು ನಿವಾಸಿ ಸದಾಶಿವ ಎಂಬುವವರ ರಬ್ಬರ್ ತೋಟ ಸಮೀಪದ ತೋಡಿನಲ್ಲಿ ಮೊಸಳೆ ಕಂಡುಬಂದಿದೆ.ಸ್ಥಳೀಯ ನಿವಾಸಿಗಳಾದ
ಸಂತೋಷ್ ಅವರು ರಬ್ಬರ್ ತೋಟದ ಸೊಪ್ಪು ಸ್ವಚ್ಛಗೊಳಿಸುವ ವೇಳೆ ಪತ್ತೆಯಾಗಿದ್ದು,
ಇದರಿಂದ ಗಾಬರಿಯಾದ ಸ್ಥಳೀಯರು ಅರಣ್ಯ ಇಲಾಖೆ
ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಮೊಸಳೆ ಸೆರೆಗೆ
ಕಾರ್ಯಾಚರಣೆ ನಡೆದಿದೆ.

2019 ಜೂನ್ ತಿಂಗಳಲ್ಲಿ ಧರ್ಮಸ್ಥಳ ಗ್ರಾಮದ ದೊಂಡೋಲೆ ಸಮೀಪ ಪಾಳು ಬಾವಿಯಲ್ಲಿ ಮೊಸಳೆ ಪತ್ತೆಯಾಗಿ ಜನರಲ್ಲಿ ಆತಂಕ ಮೂಡಿಸಿತ್ತು. ಬಳಿಕ ಅರಣ್ಯ ಇಲಾಖೆಯ ಕಾರ್ಯಚರಣೆಯಿಂದ ಮೊಸಳೆಯನ್ನು ಸಂರಕ್ಷಿಸಿ ಚಾರ್ಮಾಡಿ
ರಕ್ಷಿತಾರಣ್ಯಕ್ಕೆ ಬಿಡಲಾಗಿತ್ತು.

ಇದೀಗ ಎರಡು ವರ್ಷಗಳ ಬಳಿಕ ಬೆಳ್ತಂಗಡಿ ತಾಲೂಕಿನಲ್ಲಿ ಎರಡನೆ ಬಾರಿಗೆ ಮೊಸಳೆಯೊಂದು ಪತ್ತೆಯಾಗಿದೆ.ಸಾಮಾನ್ಯವಾಗಿ ರಕ್ಷಿತಾರಣ್ಯ ಸೇರಿದಂತೆ, ಕಾಡಂಚಿನ ನದಿಗಳಲ್ಲಿ ಮೊಸಳೆಗಳು ಕಂಡುಬರುತ್ತವೆ. ಇದೀಗ ಕಳೆದ ತಿಂಗಳು ಚಾರ್ಮಾಡಿ ಚಿಕ್ಕಮಗಳೂರು ಆಸುಪಾಸು ಅತೀ ಹೆಚ್ಚು ಮಳೆ ಸುರಿದಿದ್ದರಿಂದ ಆಹಾರ ಹುಡುಕುತ್ತಾ ಮೊಸಳೆ ಕೆಳಭಾಗಕ್ಕೆ ಬಂದಿರುವ ಸಾಧ್ಯತೆ ಇದೆ. ಮೊಸಳೆಯನ್ನು ರಕ್ಷಿಸಿ ಮತ್ತೆ ದೂರದ
ಅರಣ್ಯ ಭಾಗದಲ್ಲಿ ಬಿಡುವ ಬಗ್ಗೆ ಅಧಿಕಾರಿಗಳು ಕ್ರಮ
ಕೈಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.