Home ಬೆಂಗಳೂರು ಹಾಡುಹಗಲೇ ಮಹಿಳೆಯ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ | ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ...

ಹಾಡುಹಗಲೇ ಮಹಿಳೆಯ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ | ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಮಹಿಳೆಯೊಬ್ಬರನ್ನು ಹೆದ್ದಾರಿಯಲ್ಲೇ ಮಾನವೀಯತೆಯೂ ಇಲ್ಲದೆ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಭಯಾನಕ ಘಟನೆ ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದೆ.

ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆಯಾಗಿದ್ದು,
ಆನೇಕಲ್ ತಾಲ್ಲೂಕಿನ ಜಿಗಣಿ ನಿವಾಸಿ ಎಂಬ ಲಭ್ಯ ಮಾಹಿತಿಯಿಂದ ತಿಳಿದು ಬಂದಿದೆ . ಜಿಗಣಿಯಿಂದ ಹೆಚ್.ಎಸ್.ಆರ್ ಲೇಔಟ್ನಲ್ಲಿರೋ ಮನೆಗೆ ಮಹಿಳೆ ಹೋಗುತ್ತಿದ್ದಾಗ ಹೆದ್ದಾರಿಯಲ್ಲೇ ಮಹಿಳೆಯನ್ನ ಅಡ್ಡಗಟ್ಟಿ ಕೊಚ್ಚಿ ಕೊಲೆ ಮಾಡಲಾಗಿದೆ.

ನವೀನ ಮತ್ತು ಸಂತೋಷ ಎಂಬುವವರಿಂದ ಕೃತ್ಯ ನಡೆದಿದ್ದು, ಅನೈತಿಕ ಸಂಬಂಧ ಹಿನ್ನಲೆ ಕೊಲೆ ಮಾಡಿರುವ ಶಂಕೆ ಮೂಡಿದೆ. ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತಿದೆ.