Home ದಕ್ಷಿಣ ಕನ್ನಡ ಕಾರ್ಕಳ : ಜೆಸಿಬಿ- ಬೈಕ್ ಭೀಕರ ಅಪಘಾತ: ಬೈಕ್ ಸವಾರ ಸಾವು!

ಕಾರ್ಕಳ : ಜೆಸಿಬಿ- ಬೈಕ್ ಭೀಕರ ಅಪಘಾತ: ಬೈಕ್ ಸವಾರ ಸಾವು!

Hindu neighbor gifts plot of land

Hindu neighbour gifts land to Muslim journalist

ಕಾರ್ಕಳ : ಮೂಡುಬಿದಿರೆ ಕಾರ್ಕಳ ಹೆದ್ದಾರಿಯ ಸಾಣೂರು ಮುರತ್ತಂಗಡಿ ಎಂಬಲ್ಲಿ ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಬೈಕ್ ಸವಾರ ಇರ್ವತ್ತೂರಿನ ಅವಿನಾಶ್ (27) ಎಂಬಾತ ಮೃತಪಟ್ಟಿದ್ದಾರೆ. ಈ ಘಟನೆ ನಿನ್ನೆ ರಾತ್ರಿ ನಡೆದಿದೆ.

ಯುವಕ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಜೆಸಿಬಿ ಚಾಲಕ ನಾಪತ್ತೆಯಾಗಿದ್ದಾನೆ. ಬೇರೆ ವಾಹನ ಚಾಲಕರು ಹಾಗೂ ಸ್ಥಳೀಯರ ನೆರವು ಪಡೆದು ಜೆಸಿಬಿ ಅಡಿ ಸಿಲುಕಿಕೊಂಡಿದ್ದ ಮೃತ ದೇಹವನ್ನು ಹೊರತೆಗೆದಿದ್ದಾರೆ.

ಕಾರ್ಕಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.