Home ದಕ್ಷಿಣ ಕನ್ನಡ ಧರ್ಮಸ್ಥಳ : ಪಟ್ರಮೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು!

ಧರ್ಮಸ್ಥಳ : ಪಟ್ರಮೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು!

Hindu neighbor gifts plot of land

Hindu neighbour gifts land to Muslim journalist

ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ದಾರುಣ ಘಟನೆಯೊಂದು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಗ್ರಾಮದ ಪೆರ್ಮುಡ ಎಂಬಲ್ಲಿ ಎ.8ರಂದು ನಡೆದಿದೆ.

ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪೆರ್ಮುಡ ನಿವಾಸಿ ಚೀಂಕ್ರ ಮುಗೇರರ ಪುತ್ರ ವಸಂತ (29)ಎಂದು ಗುರುತಿಸಲಾಗಿದೆ.

ಪೆರ್ಮುಡದಲ್ಲಿ ನಿಷ್ಕ್ರಿಯಗೊಂಡಿದ್ದ ವಿದ್ಯುತ್ ಲೈನ್ ಇದ್ದು ಇದರ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಷಿಸಿದ್ದು, ಈ ವಿದ್ಯುತ್ ತಂತಿ ಪಕ್ಕದಲ್ಲೇ ಇದ್ದ ಹೆಚ್.ಟಿ.
ತಗುಲಿದ್ದು ವಸಂತರವರು ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದು ಅವರ ದೇಹವು ಅರೆಸುಟ್ಟ ಸ್ಥಿತಿಯಲ್ಲಿತ್ತು.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಶವವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಲಾಗಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.