Home Karnataka State Politics Updates ನಾನು ರಾಜೀನಾಮೇ ಯಾವುದೇ ಕಾರಣಕ್ಕೂ ಕೊಡಲ್ಲ- ಈಶ್ವರಪ್ಪ

ನಾನು ರಾಜೀನಾಮೇ ಯಾವುದೇ ಕಾರಣಕ್ಕೂ ಕೊಡಲ್ಲ- ಈಶ್ವರಪ್ಪ

Hindu neighbor gifts plot of land

Hindu neighbour gifts land to Muslim journalist

ವಾಟ್ಸಾಪ್ ಬರಹ ಡೆತ್ ನೋಟ್ ಅಲ್ಲ, ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಸಂತೋಷ್ ಅವರಿಗೆ ವರ್ಕ್ ಆರ್ಡರ್ ಕೊಟ್ಟಿಲ್ಲ ಸ್ಪಷ್ಟವಾಗಿ ಹೇಳಲಾಗಿದೆ. ಹೀಗಿದ್ದೂ ನನ್ನ ವಿರುದ್ಧ ರಾಜಿನಾಮೆ ನೀಡುವಂತೆ ಕಾಂಗ್ರೆಸ್ ಪಕ್ಷದವರು ಒತ್ತಾಯಿಸುತ್ತಿದ್ದಾರೆ, ಯಾವುದೇ ದಾಖಲೆ ಇಲ್ಲದೇ ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.

ಇನ್ನು ಸಂತೋಷ್ ಅವರು ಡೆತ್ ನೋಟ್ ಬರೆದಿಲ್ಲ. ಡೆತ್ ನೋಟ್ ಬರದೇ ಇದ್ದರೂ ಬರೆದಿದ್ದಾರೆ ಎಂದು ಸುಳ್ಳು ಮಾಹಿತಿ ಹಬ್ಬಿಸಿ, ಮತ್ತು ರಾಜೀನಾಮೆ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. ನಮ್ಮ ಇಲಾಖೆಯಲ್ಲಿ ಯಾವುದೇ ಕಾಮಗಾರಿ ಮಾಡಬೇಕಾದ್ರೆ ಮೊದಲು ಆಡಳಿತಾತ್ಮಕ ಅನುಮೋದನೆ, ಟೆಕ್ನಿಕಲ್ ಅನುಮೋದನೆ, ಸ್ಯಾಂಕ್ಷನ್ ಮಾಡಬೇಕು. ವರ್ಕ್ ಆರ್ಡ‌ರ್ ಇಶ್ಯೂ ಆಗಬೇಕು. ಇದೆಲ್ಲಾ ಪ್ರಾಸಿಜರ್ ಮುಗಿದ ನಂತರ ಕೆಲಸ ಮುಗಿದ ಮೇಲೆ ಬಿಲ್, ಹಣ ಬಿಡುಗಡೆಯಾಗಬೇಕು ಎಂದರು.

ಗಣಪತಿಯವರ ಈ ನೋಟ್ ಇಟ್ಟುಕೊಂಡು ಜಾರ್ಜ್ ಅವರ ರಾಜೀನಾಮೆ ನೀಡಲಾಗಿತ್ತು. ಆ ಡೆತ್ ನೋಟ್ ಅನ್ನು ಅವರೇ ಸ್ವತಹ ಬರೆದಿದ್ದರು. ಆ ಡೆತ್ ನೋಟ್ ಅವರ ಬಾಡಿಯ ಹತ್ತಿರವೇ ಇತ್ತು. ಅದೇ ಸಂತೋಷ್ ಪಾಟೀಲ್ ನೋಟ್ ಅನ್ನು ವಾಟ್ಸಾಪ್ ನಲ್ಲಿ ಕಳುಹಿಸಿದ್ದಾರೆ. ನನ್ನ ಸಾವಿಗೆ ಈಶ್ವರಪ್ಪನವರೇ ಕಾರಣ ಎಂಬುದಾಗಿ ಬರೆದಿದ್ದಾರೆ. ನಾನು ಎಲ್ಲೋ ಕುಳಿತು ಹೀಗೆ ಕಳಿಸಿದ್ದೇ ಯಾರಾದ್ರೂ ನಂಬುತ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ.