Home ಮಡಿಕೇರಿ ಅಣ್ಣನನ್ನೇ ಕೊಂದ ತಂಗಿ| ಸ್ನೇಹಿತರ ಜೊತೆ ಸೇರಿ ಅಣ್ಣನ ಕೊಲೆ ಮಾಡಲು ಸ್ಕೆಚ್ ಹಾಕಿದ ತಂಗಿ!!!

ಅಣ್ಣನನ್ನೇ ಕೊಂದ ತಂಗಿ| ಸ್ನೇಹಿತರ ಜೊತೆ ಸೇರಿ ಅಣ್ಣನ ಕೊಲೆ ಮಾಡಲು ಸ್ಕೆಚ್ ಹಾಕಿದ ತಂಗಿ!!!

Hindu neighbor gifts plot of land

Hindu neighbour gifts land to Muslim journalist

ಕೊಡಗು: ತಂಗಿಯೇ ಅಣ್ಣನನ್ನು ಕೊಲೆ ಮಾಡಿರುವ ಘಟನೆಯೊಂದು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂದರನಗರ ಗ್ರಾಮದಲ್ಲಿ ನಡೆದಿದೆ.

ತಂಗಿ ಭವ್ಯ ಅಣ್ಣನ ಕೊಲೆ ಮಾಡಿದ್ದು, ಸಹಜ ಸಾವೆಂದು ಬಿಂಬಿಸಿದ್ದಾಳೆ. ಆದ್ರೆ ಕೊಲೆಗೀಡಾದ ಸುರೇಶನ ಸ್ನೇಹಿತರು ನೀಡಿದ ದೂರಿನಿಂದ ಅಸಹಜ ಸಾವು ಎಂಬುದು ತಿಳಿದುಬಂದಿದೆ. ಅಣ್ಣನಿಗೆ ನಿದ್ರೆ ಮಾತ್ರೆ ನೀಡಿ, ಬಳಿಕ ಸ್ನೇಹಿತರ ಸಹಾಯದಿಂದ ಕೊಲೆ ಮಾಡಿದ್ದಾಳೆ.

ಸುಂದರನಗರ ಗ್ರಾಮದ ಮಾದೇವಮ್ಮ ಅವರಿಗೆ ಇಬ್ಬರು ಮಕ್ಕಳು. ಮಗಳು ಭವ್ಯ ಮದುವೆ ಮಾಡಿಕೊಂಡಿದ್ದರೂ, ಪತಿಯನ್ನು ಬಿಟ್ಟು ತಾಯಿ ಮನೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದಳು. ಮಾದೇವಮ್ಮ ಮನೆಯಲ್ಲಿ ಇಲ್ಲದಿದ್ದಾಗ ಕೋಣೆಯಲ್ಲಿ ಮಲಗಿದ್ದ ಸಹೋದರ ಸುರೇಶ್‌ಗೆ ಭವ್ಯ ನಿದ್ರೆ ಮಾತ್ರೆ ನೀಡಿದ್ದಾಳೆ. ಬಳಿಕ ಸ್ನೇಹಿತರಾದ ಹರೀಶ್ ಹಾಗೂ ಮಹೇಶ್ ಅವರೊಂದಿಗೆ ಜೊತೆಗೂಡಿ ಹತ್ಯೆ ಮಾಡಿದ್ದಾಳೆ.ನಂತರ ಇದೊಂದು ಸಹಜ ಸಾವೆಂದು ಹೇಳಿದ್ದಾಳೆ. ಹೊರಹೋಗಿದ್ದ ತಾಯಿ ಮನೆಗೆ ಬಂದು ನೋಡಿದಾಗ ಮಗ ಮೃತಪಟ್ಟಿದ್ದು ಗೊತ್ತಾಗಿದೆ. ಬಳಿಕ ಅವರು ಕೂಡಲೇ ಅಕ್ಕಪಕ್ಕದವರಿಗೆ ವಿಷಯ ತಿಳಿಸಿದ್ದಾರೆ. ಅಕ್ಕಪಕ್ಕದವರು ಬಂದು ನೋಡಿದಾಗ ಸುರೇಶ್ ಮೃತಪಟ್ಟಿದ್ದು ಖಚಿತವಾಗಿದೆ.

ಸುರೇಶ್ ಕುಡಿದು ಬಂದು ಮನೆಯಲ್ಲಿ ದಿನನಿತ್ಯ ಜಗಳ ಮಾಡುತ್ತಿದ್ದು ಹಾಗಾಗಿ ತಂಗಿ ಭವ್ಯ ಅಣ್ಣನ ಹತ್ಯೆ ಮಾಡಲು ಸ್ಕೆಚ್ ಹಾಕಿದ್ದಾಳೆ ಎನ್ನಲಾಗ್ತಿದೆ. ಮೃತದೇಹದ ಕುತ್ತಿಗೆಯಲ್ಲಿ ಗಾಯದ ಗುರುತು ಪತ್ತೆಯಾಗಿದ್ದು, ಕೆಲವರು ಸಾವಿನ ಬಗ್ಗೆ ಅನುಮಾನ ಸಹ ವ್ಯಕ್ತಪಡಿಸಿದ್ದರಂತೆ.

ಇದು ಅಸಹಜ ಸಾವು ಎಂದು ಅರಿತ ಸುರೇಶನ ಸ್ನೇಹಿತ ಗಣೇಶ್ ಎಂಬುವರು ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು, ಮೂರು ದಿನಗಳ ಹಿಂದೆ ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. ಏಪ್ರಿಲ್ 20ರಂದು ಈ ಘಟನೆ ನಡೆದಿದೆ.