ವಿಟ್ಲ:ಬಾಲಕಿ ಆತ್ಮಹತ್ಯೆ ಪ್ರಕರಣ!! ಪ್ರೇಮದ ನಾಟಕವಾಡಿ ಆತ್ಮಹತ್ಯೆಗೆ ಪ್ರಚೋದಿಸಿದ ಅನ್ಯಮತೀಯನ ವಿರುದ್ಧ ಕಠಿಣ ಕ್ರಮಕ್ಕೆ ಹಿಂ.ಜಾ.ವೆ ಒತ್ತಾಯ

Share the Article

ವಿಟ್ಲ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಬಿಗ್ ಟ್ವಿಸ್ಟ್ ದೊರಕಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮೀಕಾ(14) ನೇಣಿಗೆ ಶರಣಾದ ವಿದ್ಯಾರ್ಥಿನಿ. ಈ ವಿದ್ಯಾರ್ಥಿನಿಗೆ ಮುಸ್ಲಿಂ ಯುವಕನೋರ್ವ ಪ್ರೀತಿಯ ನಾಟಕವಾಡಿ ನಂತರ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಸಾಹುಲ ಹಮೀದ್ ಎಂಬಾತ ವಿದ್ಯಾರ್ಥಿನಿಯ ಜೊತೆಗೆ ಪ್ರೇಮದ ನಾಟಕವಾಡಿದ್ದಾನೆ. ನಂತರ ಮಾನಸಿಕ ಹಿಂಸೆ ನೀಡಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಿ ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಂಡು, ತನಿಖೆ ನಡೆಸಬೇಕೆಂದು ಹಿಂ.ಜಾ.ವೇ ತಾಲೂಕು ಆಗ್ರಹಿಸಿದೆ‌.

Leave A Reply