Home Karnataka State Politics Updates ರೈತರಿಗೆ ಮತ್ತೊಂದು ಗುಡ್ ನ್ಯೂಸ್ | “ರೈತಶಕ್ತಿ” ಯೋಜನೆಯಡಿ ಜಮೀನಿನ ಆಧಾರದ ಮೇಲೆ ಖಾತೆಗೆ ಬೀಳಲಿದೆ...

ರೈತರಿಗೆ ಮತ್ತೊಂದು ಗುಡ್ ನ್ಯೂಸ್ | “ರೈತಶಕ್ತಿ” ಯೋಜನೆಯಡಿ ಜಮೀನಿನ ಆಧಾರದ ಮೇಲೆ ಖಾತೆಗೆ ಬೀಳಲಿದೆ ಸಹಾಯಧನ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಸರ್ಕಾರ ರೈತರಿಗೆ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಾ, ಪ್ರೋತ್ಸಾಹಿಸುತ್ತಲೇ ಬಂದಿದೆ. ಇದೀಗ ರೈತರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಜಮೀನಿನ ಆಧಾರದ ಮೇಲೆ ಖಾತೆಗೆ ಸಹಾಯ ಧನ ಜಮೆ ಮಾಡಲಿದೆ.

2022-23ರ ರಾಜ್ಯ ಬಜೆಟ್‌ನಲ್ಲಿ ರಾಜ್ಯದಲ್ಲಿ ಕೃಷಿ ಉತ್ಪಾದತೆಯನ್ನು ಹೆಚ್ಚಿಸಲು, ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250 ರೂ. ಗಳಂತೆ ಗರಿಷ್ಟ 5 ಎಕರೆಗೆ 1250 ರೂ.ಪೋರ್ಟಲ್ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಡೀಸಲ್ ಸಹಾಯಧನಕ್ಕಾಗಿ “ರೈತ ಶಕ್ತಿ” ಯೋಜನೆಯಡಿ ಸೌಲಭ್ಯ ಪಡೆಯಲು ರೈತರು ಫ್ರೂಟ್ಸ್ ಪೋರ್ಟಲ್‌ನಲ್ಲಿ ನೋಂದಾಯಿಸಬೇಕೆಂದು ಹೇಳಲಾಗಿದೆ.

ಸೌಲಭ್ಯ ಪಡೆಯುವ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಫ್ರೂಟ್ಸ್ (Farmers Registration and Unified Beneficiary information System) ಪೋರ್ಟಲ್ ನಲ್ಲಿನ ನೋಂದಣಿಯಂತೆ ರೈತರ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಟ 5 ಎಕರೆಗೆ 1250 ರೂ.ರವರೆಗೆ ಡೀಸೆಲ್ ಸಹಾಯಧನ ಒದಗಿಸಲಾಗುವುದು.

ಕರ್ನಾಟಕ ಸರ್ಕಾರ ಇ-ಇಲಾಖೆಯ ಪೋರ್ಟಲ್ ಆಗಿದ್ದು, ಕಂದಾಯ ಇಲಾಖೆಯ “ಭೂಮಿ” ಪೋರ್ಟಲ್‌ ನೊಂದಿಗೆ ಸಂಯೋಜಿಸಲಾಗಿದ್ದು, ರೈತರ ಭೂ ಹಿಡುವಳಿಯ ವಿವರವನ್ನು ವಿಳಾಸ ಮತ್ತು ಬ್ಯಾಂಕ್ ವಿವರದೊಂದಿಗೆ ನೋಂದಾಯಿಸಿ ರೈತರಿಗೆ ಗುರುತಿನ ಸಂಖ್ಯೆ ನೀಡಲಾಗುವುದು.ಈಗಾಗಲೇ ರೈತರು ಫ್ರೂಟ್ಸ್ ಪೋರ್ಟಲ್ ನಲ್ಲಿ ಕೆಲವು ಸರ್ವೆ ನಂಬರ್/ ಭೂ ಹಿಡುವಳಿಯೊಂದಿಗೆ ನೋಂದಾಯಿಸಿಕೊಂಡಿದ್ದು, ಪ್ರತಿ ಎಕರೆಗೆ ಡೀಸೆಲ್ ಸಹಾಯಧನವನ್ನು ಎಕರೆವಾರು ನೀಡುವುದರಿಂದ ತಮ್ಮ ಉಳಿದ ಎಲ್ಲಾ ಸರ್ವೆ ನಂಬರ್/ ಭೂ ಹಿಡುವಳಿಗಳನ್ನು ಸೇರಿಸಿಕೊಳ್ಳಬೇಕು.

ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ವಿತರಿಸಲು, ಬೆಂಬಲ ಬೆಲೆ ಯೋಜನೆಯಲ್ಲಿ ಕೃಷಿ ಉತ್ಪನ್ನ ಖರೀದಿಸಲು, ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯಲು, ಕೃಷಿ/ ತೋಟಗಾರಿಕೆ/ ರೇಷ್ಮೆ ಮತ್ತು ಇತರೆ ಇಲಾಖೆಗಳಲ್ಲಿ ಸವಲತ್ತುಗಳನ್ನು ಪಡೆಯಲು ಫ್ರೂಟ್ಸ್/ಫ್ರೂಟ್ಸ್ ಪೋರ್ಟಲ್ ನಲ್ಲಿ ನೋಂದಣಿ ಅಗತ್ಯವಾಗಿರುವುದರಿಂದ ರೈತರು ನೋಂದಣಿ ಮಾಡಿಸಬೇಕೆಂದು ಹೇಳಲಾಗಿದೆ.